ಮಂಗಳೂರು : ದಿನಾಂಕ 16-04-2016 ರಂದು ಅತ್ತಾವರದ ಮಿಫ್ಟ್ ಕಾಲೇಜಿನ ಸಭಾಂಗಣದಲ್ಲಿ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡುತ್ತಾ ‘ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬ ಛಲ ಹೊಂದಿರುವ ಯುವ ಜನತೆಯ ಅವಶ್ಯಕತೆ ಇಂದು ನಮಗಿದೆ. ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿಯಲ್ಲಿ ಇಂದು ಮಂಗಳೂರಿನಲ್ಲಿ ಗುಣಶ್ರೀ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಯಲ್ಲಿ ನಮ್ಮ ದೇಶದ ಯುವಜನತೆಯನ್ನು ಗುರುತಿಸಲು ವಿಫಲರಾಗುತ್ತಿದ್ದೇವೆ. ಹಾಗಾಗಿ ನಿರುದ್ಯೋಗ ಸಮಸ್ಯೆಯೂ ಹೆಚ್ಚುತ್ತಿದೆ. ಆದರೆ ಮೋದಿ ಸರ್ಕಾರದ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಿಂದಾಗಿ ಇದು ಸುಗಮವಾಗಿದೆ. ಇಂದು ದ.ಕ. ಜಿಲ್ಲೆಯಲ್ಲೇ ಸುಮಾರು 25,000 ಯುವಜನರು ಉದ್ಯೋಗ ತರಬೇತಿ ಮತ್ತು ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಇದು ಬಿಜೆಪಿ ಆಡಳಿತದಿಂದಾದ ಅಚ್ಛೇ ದಿನ್ ಎನ್ನುವುದರಲ್ಲಿ ಸಂಶಯವಿಲ್ಲ. ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ಬಹಳಷ್ಟು ಪ್ರಭಾವಶಾಲಿ, ಲಾಭದಾಯಕ ಹಾಗೂ ಜನರ ಹಿತಕ್ಕೆ ಸಂಬಂಧಪಟ್ಟ ಯೋಜನೆಗಳಾಗಿದ್ದು, ಅನೇಕ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶವನ್ನು ಹೊಂದಬಹುದಾಗಿದೆ. ಅದರಲ್ಲಿ ಮುದ್ರಾ ಬ್ಯಾಂಕ್ ಸ್ವ ಉದ್ಯೋಗ ಮಾಡುವವರಿಗೆ ದಾರಿ ಮಾಡಿಕೊಡುತ್ತದೆ.
ಗುಣಶ್ರೀ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ ಹೊಲಿಗೆ ಯಂತ್ರ ತರಬೇತಿಯನ್ನು 30 ಜನರಿಗೆ ಹಾಗೂ ಕೈಕಸೂತಿ ತರಬೇತಿಯನ್ನು 30 ಜನರ ತರಬೇತಿ ನೀಡಲು ಅವಕಾಶ ಕಲ್ಪಿಸಲಾಗಿದೆ. 1 ತಿಂಗಳ ತರಬೇತಿ ನಂತರ ಪರೀಕ್ಷೆಯು ನಡೆಯಲಿದ್ದು ಇದಕ್ಕೆ PMKVY ವತಿಯಿಂದ ಮೌಲ್ಯಮಾಪನ ನಡೆಯಲಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಕೌಶಲ್ಯ ಕಾರ್ಡ್ ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ತದನಂತರ ಲೋನ್ ತೆಗೆದುಕೊಂಡು ಹೊಲಿಗೆ ಯಂತ್ರ ಖರೀದಿ, ಮನೆಯಿಂದಲೇ ಎಂಬ್ರಾಯಿಡರಿ ವರ್ಕ್ ಹೀಗೆ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಸಹಾಯಕವಾಗುತ್ತದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯಬೇಕು’ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಟಿ.ಡಿ. ಕೆಂಪರಾಜು ಕುಲಸಚಿವರು ಮಂಗಳೂರು ವಿಶ್ವವಿದ್ಯಾಲಯ, ಅಧ್ಯಕ್ಷತೆಯನ್ನು ಮಾಜಿ ಸಚಿವರಾದ ಶ್ರೀ ಬಿ.ನಾಗರಾಜ ಶೆಟ್ಟಿ, ಮಿಫ್ಟ್ ಕಾಲೇಜಿನ ನಿರ್ದೇಶಕರಾದ ಶ್ರೀ ಎಂ.ಜಿ. ಹೆಗಡೆ, ಹಣಕಾಸು ಅಧಿಕಾರಿ ಮನೋಹರ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಕು. ಚಂದ್ರಲೇಖ ಗೌಡ ಮತ್ತಿನ್ನಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.