ನವದೆಹಲಿ: ಭಾರತೀಯ ಕ್ರಿಕೆಟರ್ ಮಹೇಂದ್ರ ಸಿಂಗ್ ಧೋನಿ ಅವರು ಶುಕ್ರವಾರ ರಿಯಾಲಿಟಿ ಫರ್ಮ್ ಆಮ್ರಪಾಲಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹೌಸಿಂಗ್ ಪ್ರಾಜೆಕ್ಟ್ ನಿವಾಸಿಗಳು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿ ಈ ಬಗ್ಗೆ ಧೋನಿಯನ್ನು ದೂಷಿಸಿದ ಬಳಿಕ ಈ ಘಟನೆ ನಡೆದಿದೆ.
‘ಧೋನಿಯವರ ಹೆಸರು ವಿನಾ ಕಾರಣ ಎಳೆದು ತರಲಾಗಿತ್ತು, ಹೀಗಾಗಿ ಅವರನ್ನು ಸಂಸ್ಥೆಯಿಂದ ದೂರ ಉಳಿಯುವಂತೆ ಸಲಹೆ ನೀಡಿದೆವು’ ಎಂದು ಆಮ್ರಪಲಿ ಪ್ರಕಟನೆಯಲ್ಲಿ ತಿಳಿಸಿದೆ.
ಆಮ್ರಪಾಲಿ ಗ್ರೂಪ್ ನೋಯ್ದಾ ಮತ್ತು ದೆಹಲಿಯ ಉಪ ನಗರಗಳಲ್ಲಿ ಸಫೈರ್ ಹೌಸಿಂಗ್ ಪ್ರಾಜೆಕ್ಟ್ ಅಡಿಯಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿ ಸುಮಾರು 1 ಸಾವಿರ ಫ್ಲ್ಯಾಟ್ ಗಳನ್ನು ಮಾರಾಟ ಮಾಡಿತ್ತು. ಆದರೆ ಬಿಲ್ಡರ್ಸ್ ಅಲ್ಲಿನ ನಿವಾಸಿಗಳಿಗೆ ಈ ಮೊದಲೇ ಒಪ್ಪಿಕೊಂಡಿದ್ದ ಅನೇಕ ಸೌಲಭ್ಯಗಳನ್ನು ನೀಡಿರಲಿಲ್ಲ. ಇದರಿಂದ ಮನನೊಂದ ಅಪಾರ್ಟ್ ಮೆಂಟ್ ನಿವಾಸಿಗಳು ಸೋಶಿಯಲ್ ಮೀಡಿಯಾಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಆಮ್ರಪಾಲಿಯ ರಾಯಭಾರಿಯಾಗಿದ್ದ ಧೋನಿಯವರಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಂಡಿದ್ದು, ನಂತರ ಧೋನಿ ಆಮ್ರಪಾಲಿ ಗ್ರೂಪಿನ ಆಡಳಿತ ಮಂಡಳಿಯವರ ಬಳಿ ಬಾಕಿ ಉಳಿದಿರುವ ಸೌಲಭ್ಯಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದರು.
ಆದರೆ ಇದುವರೆಗೂ ಪ್ರಾಜೆಕ್ಟ್ ಪೂರ್ಣವಾಗದೇ ಇದ್ದುದಕ್ಕೆ ಧೋನಿಯವರು ರಾಯಭಾರಿ ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.
ಆದರೆ ಅವರ ಪತ್ನಿ ಈಗಲೂ ಆಮ್ರಪಾಲಿಯ ನಿರ್ದೇಶಕಿ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಮೂಲಗಳ ಪ್ರಕಾರ ಇವರೂ ಕೂಡಾ ರಾಜೀನಾಮೆ ಸಾಧ್ಯತೆಗಳಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.