ನವದೆಹಲಿ: ಪಾಕಿಸ್ಥಾನದ ಕೋಟ್ ಲಖ್ಪತ್ ಜೈಲಿನಲ್ಲಿ ಮೃತನಾದ ಭಾರತೀಯ ಪ್ರಜೆ ಕೃಪಾಲ್ ಸಿಂಗ್ ಅವರ ಮೃತದೇಹವನ್ನು ಭಾರತಕ್ಕೆ ಕರೆತರಲಾಗುತ್ತಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಮಂಗಳವಾರ ಲಾಹೋರ್ನಲ್ಲಿ ವೈದ್ಯರ ತಂಡ ಕೃಪಾಲ್ ಅವರ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಿದೆ, ಅದು ಮುಗಿದ ಬಳಿಕ ಭಾರತಕ್ಕೆ ಕಳುಹಿಸಿಕೊಡಲಾಗುತ್ತದೆ ಎನ್ನಲಾಗಿದೆ.
ಕೃಪಾಲ್ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿ ಆತನ ಮೃತದೇಹವನ್ನು ಭಾರತಕ್ಕೆ ತರಬೇಕು ಮತ್ತು ಇಲ್ಲೇ ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು ಎಂದು ಅವರ ಕುಟುಂಬ ಸದಸ್ಯರು ಕೇಂದ್ರಕ್ಕೆ ಮನವಿ ಮಾಡುತ್ತಲೇ ಇದ್ದರು.
ಕೃಪಾಲ್ ಸಾವಿನ ಹಿಂದೆ ಕುತಂತ್ರವಿದೆ, ಅವರದ್ದು ಸಹಜ ಸಾವಲ್ಲ ಅದರ ಹಿಂದೆ ದೊಡ್ಡ ಕುತಂತ್ರವಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.