ನವದೆಹಲಿ: ಪಾಕಿಸ್ಥಾನ ಜೈಲಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತನಾದ ಭಾರತೀಯ ಪ್ರಜೆ ಕೃಪಾಲ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಪಾಕಿಸ್ಥಾನ ಮಂಗಳವಾರ ಭಾರತಕ್ಕೆ ಹಸ್ತಾಂತರ ಮಾಡಿದೆ.
ವಾಘಾದ ಅಟ್ಟಾರಿ ಗಡಿಯಲ್ಲಿ ಬಿಎಸ್ಎಫ್ ಯೋಧರು ಪಾರ್ಥಿವ ಶರೀರವನ್ನು ಪಾಕಿಸ್ಥಾನಿ ಅಧಿಕಾರಿಗಳಿಂದ ಪಡೆದುಕೊಂಡಿದ್ದಾರೆ. ಬಳಿಕ ದಾಖಲೆ ಮತ್ತು ಇತರ ಪ್ರಕ್ರಿಯೆಗಳಿಗಾಗಿ ಅದನ್ನು ಚಕ್ಪೋಸ್ಟ್ ಬಳಿಕೆ ಕರೆದೊಯ್ದಿದ್ದಾರೆ.
ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅಧಿಕಾರಿಗಳು ಪಾರ್ಥಿವ ಶರೀರವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲಿದ್ದಾರೆ.
ಕೃಪಾಲ್ ಅವರನ್ನು ಪಾಕಿಸ್ಥಾನಿಯರು ಜೈಲಿನಲ್ಲಿ ಕೊಲೆ ಮಾಡಿದ್ದಾರೆ ಅವರ ಕುಟುಂಬ ಸದಸ್ಯರು ಬಲವಾದ ಆರೋಪ ಮಾಡಿದ್ದಾರೆ.
ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ರಾಜನಾಥ್ ಸಿಂಗ್ ಅವರು ಕೃಪಾಲ್ ಶವವನ್ನು ಭಾರತಕ್ಕೆ ಕರೆತರುವ ಭರವಸೆಯನ್ನು ಅವರ ಕುಟುಂಬ ಸದಸ್ಯರಿಗೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.