ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಶ್ರೀರಾಮನವಮಿ ಉತ್ಸವಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್ ಶ್ರೀರಾಮನವಮಿ ಉತ್ಸವಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.
ಶ್ರೀರಾಮ ಒಬ್ಬ ಆದರ್ಶ ರಾಜನಾಗಿ, ಅಣ್ಣನಾಗಿ, ಪತಿಯಾಗಿ ತನ್ನ ಕರ್ತವ್ಯವನ್ನು ನಿರ್ವಹಿಸಿದ್ದು ಮಾತ್ರವಲ್ಲದೆ ಲೋಕ ಕಲ್ಯಾಣಾರ್ಥವಾಗಿ ದುಷ್ಟರನ್ನು ಸದೆ ಬಡಿದು ಧರ್ಮವನ್ನು ನೆಲೆಗೊಳಿಸಿದನು.
ರಾಮ ಎಂಬ ಎರಡಕ್ಷರವು ತಾರಕ ಮಂತ್ರವಾಗಿ ನಮ್ಮೆಲ್ಲರ ದುಃಖ ದುರಿತಗಳನ್ನು ಹೋಗಲಾಡಿಸುವ ಅಪಾರ ಶಕ್ತಿಯನ್ನು ಹೊಂದಿದೆ ಎಂಬುದಾಗಿ ಅವರು ಪುರಾಣದ ಕಥೆಗಳನ್ನು ಉಲ್ಲೆಖಿಸಿ ಅಭಿಪ್ರಾಯವಿತ್ತರು.
ಈ ಸಂದರ್ಭದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಪ್ರಸಾದ ಹಂಚಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.