ನವದೆಹಲಿ : ಯುಪಿಎ ಸರಕಾರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ವಿವಿಐಪಿ ವಿಮಾನ ಖರೀದಿ ಹಗರಣವಾದ ಅಗಸ್ತಾ ವೆಸ್ಟ್ಲ್ಯಾಂಡ್ ಖರೀದಿಯಲ್ಲಿ ಕಾಂಗ್ರೇಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾತ್ರವಿದೆ ಎಂದು ಹೇಳಲಾಗುತ್ತಿದ್ದು ಅವರನ್ನು ಕೇಂದ್ರ ಸರಕಾರ ಏತಕ್ಕಾಗಿ ಇದುವರೆಗೆ ಬಂಧಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಒಂದೊಮ್ಮೆ ತಾನು ಸೋನಿಯಾ ಗಾಂಧಿಯ ಸ್ಥಾನದಲ್ಲಿದ್ದಿದ್ದರೆ ನನ್ನನ್ನು ಎಳೆದು ಕರೆದುಕೊಂಡು ಹೋಗಲಾಗುತ್ತಿತ್ತು. ಸರಕಾರ ಸೋನಿಯಾ ಗಾಂಧಿಯನ್ನು ಯಾಕೆ ಬಂಧಿಸುತ್ತಿಲ್ಲ? ರಾಬರ್ಟ್ ವಾದ್ರಾನನ್ನು ಯಾಕೆ ಬಂಧಿಸುತ್ತಿಲ್ಲ ? ಸರಕಾರದ ಬಳಿ ಸಾಕ್ಷಗಳಿಲ್ಲವೇ? ಎಂದು ಅವರು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಅಗಸ್ತಾ ವೆಸ್ಟ್ಲ್ಯಾಂಡ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸೋನಿಯಾ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಸುಳ್ಳಿಂದ ಅವರ ಸ್ಥಾನಕ್ಕೂ ಕುತ್ತು ಬರಬಹುದು.
ಅಲ್ಲದೇ ಪ್ರಸಕ್ತ ಸರಕಾರ ಅಗಸ್ತಾ ವೆಸ್ಟ್ಲ್ಯಾಂಡ್ ಕಂಪನಿಯನ್ನು ಕಪ್ಪು ಪಟ್ಟಿಯಿಂದ ತೆಗೆಯಲಾಗಿದೆ ಎಂಬುದು ಸುಳ್ಳಾಗಿದ್ದು, ಅಸಲಿಗೆ ಅಗಸ್ತಾ ವೆಸ್ಟ್ಲ್ಯಾಂಡ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ನಾನು ರಾಜ್ಯಸಭಾದ ಸಭಾಪತಿಯವರ ಬಳಿ ಈ ಬಗ್ಗೆ ತನಿಖೆ ನಡೆಸಲು ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.