ಮಂಗಳೂರು : ಮಂಗಳೂರು ಆಕಾಶವಾಣಿ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ, ಮೇ 2 ರಿಂದ ನಿರಂತರವಾಗಿ ಮೇ 20 ರವರೆಗೆ ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ. ಸಾರ್ವಜನಿಕರ ಕುಂದುಕೊರತೆಗಳು, ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ವಿವಿಧ ಯೋಜನೆಗಳು, ಸೌಲಭ್ಯಗಳು, ಮುಂತಾದ ವಿಷಯಗಳ ಕುರಿತು ನೇರವಾಗಿ ಶ್ರೋತೃಗಳ ಜೊತೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿದೆ.
ಈ ಕಾರ್ಯಕ್ರಮದಲ್ಲಿ ಶ್ರೋತೃಗಳು ನೇರವಾಗಿ ಭಾಗವಹಿಸಲು 0824-2211999 ಅಥವಾ 8277038000 ದೂರವಾಣಿ ಸಂಖ್ಯೆಗೆ ಕರೆಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಮೇ.2 ರ ಸಂಜೆ ಐದು ಗಂಟೆಗೆ ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪ್ರೀಯಾಂಕಾ ಮೇರಿ ಫ್ರಾನ್ಸಿಸ್ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಮೇ. 3ರಂದು ಉಡುಪಿ ಜಿಲ್ಲಾ ಪಂಚಾಯತ್ನ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಅವರು ಭಾಗವಹಿಸಿ ಸ್ವಚ್ಛ ಭಾರತ ಕುರಿತು ಸಂವಾದವನ್ನು ನಡೆಸಲಿದ್ದಾರೆ. ನಂತರ ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಿಂದುಳಿದ ಅಲ್ಪಸಂಖ್ಯಾತ ಇಲಾಖೆ ಮುಂತಾದ ಜಿಲ್ಲಾ ಪಂಚಾಯತ್ನ ಅಡಿಯಲ್ಲಿ ಬರುವ ಎಲ್ಲಾ ಇಲಾಖೆಯವರು ಭಾಗಹಿಸಲಿದ್ದಾರೆ.
ಒಟ್ಟು 15 ದಿನಗಳ ಕಾಲ ನಿರಂತರವಾಗಿ ಮಂಗಳೂರು ಆಕಾಶವಾಣಿಯಿಂದ ಬಿತ್ತರವಾಗುವ ಈ ಕಾರ್ಯಕ್ರಮವನ್ನು ಎಫ್.ಎಮ್. ತರಂಗಾಂತರ 100.3 Mhz ಮೇಡಿಯಂ ವೇವ್ ತರಂಗಾಂತರ 1089 ಕಿ. ಹ. ಅಥವಾ 272.5 ಮೀಟರ್ಸ್ನಲ್ಲಿ ಕೇಳಬಹುದು. ಶ್ರೋತೃಗಳು ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.