ಮಾಲ್ಡಾ: ಪಶ್ಚಿಮಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವಾರು ಕಡೆ ನಡೆದ ಕಾಂಗ್ರೆಸ್-ಟಿಎಂಸಿ ನಡುವಣ ಕಲಹದಲ್ಲಿ ನಾಲ್ವರು ಟಿಎಂಸಿ ಕಾರ್ಯಕರ್ತರು ಅಸುನೀಗಿದ್ದಾರೆ. ಅಲ್ಲದೇ 3 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಂಗ್ರೆಸ್ ನಾಯಕರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮವಾಗಿ ನಮ್ಮ ನಾಲ್ವರು ಕಾರ್ಯಕರ್ತರು ಅಸುನೀಗಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಕಾಂಗ್ರೆಸ್ ಈ ಆರೋಪವನ್ನು ತಿರಸ್ಕರಿಸಿದೆ.
ಶನಿವಾರ 5ನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆದಿದ್ದು, ಶೇ.78.25ರಷ್ಟು ಮತದಾನವಾಗಿತ್ತು. ಚುನಾವಣಾ ಮುಕ್ತಾಯದ ವೇಳೆಗೆ ಸುಮಾರು 186 ಮಂದಿ ಬಂಧಿತರಾಗಿದ್ದರು. ಹಿಂಸಾಚಾರದಲ್ಲಿ 15 ಮಂದಿ ಗಾಯಗೊಂಡಿದ್ದರು.
ಇಲ್ಲಿನ ಚುನಾವಣಾ ಫಲಿತಾಂಶ ಮೇ 6 ರಂದು ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.