ನವದೆಹಲಿ : ಉತ್ತರಾಖಂಡ ರಾಜಕೀಯ ಅಸ್ತಿರತೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಉತ್ತರಾಖಂಡದ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತು ಪಡಿಸಲು ಅವಕಾಶ ನೀಡ ಬಹುದೆ ಎಂದು ಕೇಳಿದೆ.
ಉತ್ತರಾಖಂಡದಲ್ಲಿ ಸರಕಾರದ ಶಾಸಕರೇ ಬಂಡಾಯವೆದಿದ್ದು ಸರಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಇದರಿಂದ ಸರಕಾರ ರಾಜಕೀಯ ಅಸ್ಥಿರತೆ ಉಂಟಾಗಿ ಬಹುಮತದ ಕೊರತೆ ಎದುರಿಸಿದ್ದು, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿತ್ತು.
ಇದನ್ನು ವಿರೋಧಿಸಿ ಉತ್ತರಾ ಖಂಡ್ ಸರಕಾರ ಕೋರ್ಟ್ ಮೆಟ್ಟಲೇರಿದ್ದು, ಹೈಕೋರ್ಟ್ ರಾಷ್ಟ್ರಪತಿ ಆಡಳಿತವನ್ನು ತೆರುವುಗೊಳಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಮೆಟ್ಟಲೇರಿತ್ತು.
ಈ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಉತ್ತರಾಖಂಡದಲ್ಲಿ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತು ಪಡಿಸಲು ಅವಕಾಶ ನೀಡಲು ಸಾಧ್ಯವಿದೆಯೆ ಎಂದು ಕೇಂದ್ರ ಸರಕಾರವನ್ನು ಕೇಳಿದೆ. ಈ ಬಗ್ಗೆ ಕೇಂದ್ರ ತನ್ನ ಅಭಿಪ್ರಾಯವನ್ನು ಮೇ.6 ರೊಳಗೆ ತಿಳಸಬೇಕು ಎಂದು ಹೇಳಿದೆ. ಅಲ್ಲದೇ ಈ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಸಾಧ್ಯತೆಗಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.