ನವದೆಹಲಿ : ಮೇ ಅಂತ್ಯದಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಹರ್ಷವರ್ಧನ್ ಅವರು ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಅಧಿಕೃತ ಮುನ್ಸೂಚನೆಯನ್ನು ಮೇ 15 ರಂದು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಸೇರಿದಂತೆ ಇನ್ನೂ ಹಲವಾರು ಹವಾಮಾನ ಮುನ್ಸೂಚನಾ ಸಂಸ್ಥೆಗಳು ಹೇಳಿರುವಂತೆ ಈ ವರ್ಷ ಸಾಮಾನ್ಯ ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ.
ಮಾನ್ಸೂನ್ ಕೇರಳಕ್ಕೆ ಪ್ರವೇಶಿಸುವ ಸಮಯದ ಬಗ್ಗೆ ಮುನ್ಸೂಚನೆ ನೀಡುತ್ತಿರುವ ಹವಾಮಾನ ಇಲಾಖೆ 2005 ರಿಂದ 2014 ರವರೆಗೆ ನಿಖರವಾಗಿಯೇ ಮಳೆಯ ಪ್ರಾರಂಭದ ಕಾಲವನ್ನು ಸೂಚಿಸಿದ್ದು, 2015 ಮತ್ತು 2016 ರಲ್ಲಿ ಜೂನ್ 5 ರ ವೇಳೆಗೆ ಮಾನ್ಸೂನ್ ಪ್ರಾರಂಭವಾಗಿತ್ತು. ಈ ಬಾರಿಯೂ ನಾಲ್ಕೈದು ದಿನಗಳ ವ್ಯತ್ಯಾಸದೊಂದಿಗೆ ಮೇ ಅಂತ್ಯಕ್ಕೆ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಲಿದೆ ಎಂದು ಸಚಿವರು ಹೇಳಿದ್ದಾರೆ.
ಬಿರು ಬಿಸಿಲಿನಿಂದ ತತ್ತರಿಸಿರುವ ಜನರಿಗೆ ಈ ಸುದ್ದಿ ಸ್ವಲ್ಪ ಮಟ್ಟಿಗೆ ತಂಗಾಳಿಯನ್ನು ತಂದಂತಾಗಿದೆ. ಮಳೆರಾಯನ ಕೃಪೆ ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.