ನವದೆಹಲಿ: ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅವರು ಕಾಂಗ್ರೆಸ್ ವಿರುದ್ಧದ ತಮ್ಮ ಹೋರಾಟವನ್ನು ತೀಕ್ಷ್ಣಗೊಳಿಸಿದ್ದಾರೆ. ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಶೀಘ್ರದಲ್ಲೇ ಜೈಲು ಸೇರುವುದು ಖಚಿತ ಎಂದು ಅವರು ಹೇಳಿಕೊಂಡಿದ್ದಾರೆ.
ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದರೆ ರಾಜಕೀಯ ಬಿಡುತ್ತೇನೆ ಎಂದು ಹೇಳುವ ಅಗತ್ಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಅವರಿಗಿಲ್ಲ, ಅವರು ತಪ್ಪಿತಸ್ಥ ಎಂದು ಸಾಬೀತಾದರೆ ಜೈಲು ಸೇರುವ ಅವರು ರಾಜಕೀಯ ಸನ್ಯಾಸಿಯಾಗಿಯೇ ಆಗುತ್ತಾರೆ ಎಂದು ಸ್ವಾಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಹಗರಣದ ತನಿಖೆ ನಡೆಯಬೇಕು ಎಂಬ ಬೇಡಿಕೆಗೆ ಪ್ರತಿಕ್ರಿಯಿಸಿರುವ ಅವರು, ಹಿಂದಿನ ಯುಪಿಎ ಸರ್ಕಾರ ಯಾಕೆ ಅಂತಹ ತನಿಖೆಯನ್ನು ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಸೋನಿಯಾ ಗಾಂಧಿ ಹೆಸರು ಹಗರಣದ ಪಟ್ಟಿಯಲ್ಲಿ ಇರುವುದರಿಂದ ಪ್ರತಿಪಕ್ಷಗಳು ನಿನ್ನೆ ರಾಜ್ಯಸಭಾ ಭಾಷಣದ ಸಂದರ್ಭ ಅಡ್ಡಿಯನ್ನು ಉಂಟು ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.