ದೆಹಲಿ: ಆದಾಯ ಇಲಾಖೆಯಲ್ಲಿನ 33 ಹಿರಿಯ ಅಧಿಕಾರಿಗಳಿಗೆ ಅವಧಿಗೂ ಮುನ್ನವೇ ನಿವೃತ್ತಿ ಪಡೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಾರ್ಯದಲ್ಲಿ ಒಳ್ಳೆಯ ಪ್ರದರ್ಶನ ನೀಡದ ಹಿನ್ನಲೆಯಲ್ಲಿ ಈ ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಕಳೆದ 2 ವರ್ಷದಲ್ಲಿ ಕೆಲಸದಲ್ಲಿ ಆಸಕ್ತಿ ತೋರದ ಹಾಗೂ ಶಿಸ್ತು ಕ್ರಮದ ಹಿನ್ನಲೆಯಲ್ಲಿ 72 ಅಧಿಕಾರಿಗಳನ್ನು ವಜಾ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಇಷ್ಟು ಅಧಿಕಾರಿಗಳ ವಿರುದ್ಧ ಸರ್ಕಾರ ಶಿಕ್ಷೆಯನ್ನು ನೀಡಿದೆ.
ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಉದಾಸೀನ ಪ್ರವೃತ್ತಿ ಇಲಾಖೆಯಲ್ಲಿನ ಕಾರ್ಯಗಳಿಗೆ ತೊಡಕಾಗಬಾರದು ಎಂಬ ಕಾರಣಕ್ಕೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.
ಜನರಿಗೆ ಕಿರುಕಳ ನೀಡುವ, ವೃತ್ತಿಪರತೆ ತೋರಿಸದ ಅಧಿಕಾರಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನಿರಂತರ ದೂರುಗಳು ಬರುತ್ತಿದೆ. ಇಂತಹ 122 ಅಧಿಕಾರಿಗಳ ಹೆಸರನ್ನು ಸರ್ಕಾರ ಶಾರ್ಟ್ ಲಿಸ್ಟ್ ಮಾಡಿಕೊಂಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.