ನವದೆಹಲಿ: ನಗರಗಳಲ್ಲಿರುವ ಬಡ ಜನರಿಗೆ ’ಪ್ರಧಾನಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ ಮನೆಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಸುಮಾರು 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಲೋಕಸಭೆಯಲ್ಲಿ ಹೇಳಿದ್ದಾರೆ.
ಈ ಯೋಜನೆ ಅಡಿಯಲ್ಲಿ ಭೂಕಂಪ, ಪ್ರವಾಹ, ಭೂಕುಸಿತ, ಚಂಡಮಾರುತ ಮುಂತಾದ ಸಮಸ್ಯೆಗಳ ವಿರುದ್ಧ ಸುರಕ್ಷತೆಯ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ಮನೆಗಳನ್ನು ವಿನ್ಯಾಸಗೊಳಿಸಲಾಗುವುದು. ನ್ಯಾಶನಲ್ ಬಿಲ್ಡಿಂಗ್ ಕೋಡ್ ಹಾಗೂ ಇಂಡಿಯನ್ ಸ್ಟಾಂಡರ್ಡ್ ಕೋಡ್ ಅನುಸಾರ ಮನೆಗಳನ್ನು ನಿರ್ಮಿಸುವ ಯೋಜನೆ ಇದೆ ಎಂದು ಸಚಿವ ನಾಯ್ಡು ಹೇಳಿದ್ದಾರೆ.
ಈ ಯೋಜನೆಯಡಿ ಫಲಾನುಭವಿಗಳು ಬಡವರಾಗಿದ್ದು, ನಗರಗಳಲ್ಲಿ ಇಡಬ್ಲೂಜಿ ಮತ್ತು ಎಲ್ಐಜಿ ವಿಭಾಗದ ಅಡಿಯಲ್ಲಿ ವಾಸಿಸುವ ಜನರಿಗಾಗಿ ಸುಮಾರು 2 ಕೋಟಿಗೂ ಅಧಿಕ ಮನೆಗಳನ್ನು ನಿರ್ಮಿಸಲಾಗುವುದು. ಈ ಯೋಜನೆಯನ್ನು 2015ರಲ್ಲಿ ಆರಂಭಿಸಲಾಗಿದ್ದು, 2022ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ವಸತಿ ಮತ್ತು ಬಡತನ ನಿರ್ಮೂಲನ ಸಚಿವಾಲಯದ ಪ್ರಯತ್ನವಾಗಿ ದೀನ್ದಯಾಳ್ ಅಂತ್ಯೋದಯ ಯೋಜನೆ ಅಂಗವಾಗಿ ’ನಗರದ ವಸತಿಹೀನರಿಗೆ ಆಶ್ರಯ’ ಯೋಜನೆ ಮೂಲಕ ಶಾಶ್ವತ ಆಶ್ರಯ ಒದಗಿಸಲಾಗುವುದು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.