ಜೈಪುರ : ರಾಜಸ್ಥಾನದ 8 ನೇ ತರಗತಿಯ ಸಮಾನ ವಿಜ್ಞಾನ ಪಠ್ಯಪುಸ್ತಕದಿಂದ ಜವಾಹರ್ಲಾಲ್ ನೆಹರು ಅವರ ಕುರಿತಾದ ಚರಿತ್ರೆಯನ್ನು ಕೈಬಿಡಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ದೇಶದ ನಾಯಕರುಗಳಾದ ಮಹಾತ್ಮಾಗಾಂಧಿ, ಸುಭಾಷ್ಚಂದ್ರ ಬೋಸ್, ಭಗತ್ ಸಿಂಗ್, ಸಾವರ್ಕರ್, ವಿವೇಕಾನಂದ ಇನ್ನಿತರರ ಬಗ್ಗೆ ಪಠ್ಯದಲ್ಲಿ ಉಲ್ಲೇಖಿಸಲಾಗಿದ್ದು, ದೇಶದ ಪ್ರಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರು ಅವರ ಹೆಸರು ಮತ್ತು ಕಾಂಗ್ರೆಸ್ನ ಇತರ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಕೈಬಿಟ್ಟಿದೆ ಎನ್ನಲಾಗಿದೆ.
ನೆಹರು ಮತ್ತಿನ್ನಿತರರ ಹೆಸರನ್ನು ಪಠ್ಯದಲ್ಲಿ ಉಲ್ಲೇಖಿಸದಿರುವುದು ಕೇಸರೀಕರಣದ ಒಂದು ಭಾಗ, ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲೆಟ್ ಆರೋಪ ಮಾಡಿದ್ದಾರೆ.
ರಾಜಸ್ಥಾನ ರಾಜ್ಯ ಪಠ್ಯಪುಸ್ತಕ ಮಂಡಳಿ ವೆಬ್ಸೈಟ್ನಲ್ಲಿ ನೂತನ ಪಠ್ಯಕ್ರಮ ಪ್ರಕಟಿಸಿದ್ದು, ನೂತನ ಪಠ್ಯಪುಸ್ತಕ ಇನ್ನೂ ಮಾರುಕಟ್ಟೆಗೆ ಬಂದಿಲ್ಲ. ಆದರೆ ನೆಹರೂ ಮತ್ತಿನ್ನಿತರರ ಹೆಸರನ್ನು ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪಠ್ಯಕ್ರಮವನ್ನು ಪರಿಷ್ಕರಿಸಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.
ಆದರೆ ನೂತನ ಪಠ್ಯಕ್ರಮ ರೂಪಿಸುವಲ್ಲಿ ಸರ್ಕಾರದ ಪಾತ್ರವಿಲ್ಲ. ಇದನ್ನು ಸಂಶೋಧನಾ ಮತ್ತು ತರಬೇತಿ ಸಂಸ್ಥೆ ರೂಪಿಸಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ವಾಸುದೇವ ದೇವ್ನಾನಿ ಹೇಳಿದ್ದಾರೆ.
ಈ ಹಿಂದೆ ಪಠ್ಯಕ್ರಮದಲ್ಲಿ ನೆಹರು ಅವರ ಬಗ್ಗೆ, ರಾಷ್ಟ್ರೀಯ ಚಳುವಳಿ, ಸ್ವಾತಂತ್ರ್ಯದ ಸಂದರ್ಭ, ಸರ್ಕಾರ ರಚನೆ, ಇನ್ನಿತರ ಪ್ರಮುಖ ಅಂಶಗಳನ್ನು ಒಳಗೊಂಡಿತ್ತು. ಆದರೆ ನೂತನ ಪಠ್ಯಕ್ರಮದಲ್ಲಿ ಇವುಗಳನ್ನು ತೆಗೆದು ಹಾಕಲಾಗಿದ್ದು, ಕಾಂಗ್ರೆಸ್ನ ಕೆಲವು ಮಹನೀಯರುಗಳ ಹೆಸರನ್ನೂ ಕೈಬಿಡಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.