ಗೋರಖ್ಪುರ : ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಹುಲಿಯ ಮೇಲೆ ಕುಳಿತಿರುವಂತೆ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ, ಅಸಾದುದ್ದೀನ್ ಓವೈಸಿ ಮತ್ತು ಮಾಯಾವತಿ ಇವರುಗಳೆಲ್ಲರೂ ಕತ್ತೆಯ ಮೇಲೆ ಕುಳಿತಿರುವಂತೆ ಪೋಸ್ಟರ್ ಒಂದನ್ನು ರಚಿಸಲಾಗಿದ್ದು ಇದು ಪೋಸ್ಟರ್ ಕಿತ್ತಾಟಕ್ಕೆ ದಾರಿ ಮಾಡಿಕೊಟ್ಟಿದೆ.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷಗಳ ನಡುವಿನ ಪೋಸ್ಟರ್ ಕಿತ್ತಾಟ ಈಗಾಗಲೇ ಪ್ರಾರಂಭವಾದಂತಾಗಿದೆ.
ಗೋರಖ್ಪುರ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ದಳದ ವತಿಯಿಂದ ಪೋಸ್ಟರ್ ಒಂದನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಹುಲಿಯ ಮೇಲೆ ಸವಾರಿ ಮಾಡುತ್ತಿರುವಂತೆ ಚಿತ್ರಿಸಲಾಗಿದೆ. ರಾಹುಲ್ಗಾಂಧಿ, ಅಖಿಲೇಶ್ ಯಾದವ್, ಓವೈಸಿ ಮತ್ತು ಮಾಯಾವತಿಯವರುಗಳನ್ನು ಕತ್ತೆಯ ಮೇಲೆ ಸವಾರಿ ಮಾಡುತ್ತಿರುವಂತೆ ಚಿತ್ರಿಸಿ ಪೋಸ್ಟರ್ ಮೇಲ್ಭಾಗದಲ್ಲಿ `ಸಂಕಲ್ಪ 2017 – ಅಬ್ ಕಿ ಬಾರ್ ಯೋಗಿ ಸರ್ಕಾರ್’ ಎಂಬ ವಾಕ್ಯವನ್ನು ಬರೆಯಲಾಗಿದೆ.
ಪೋಸ್ಟರ್ ಕುರಿತು ಅನೇಕರು ಹೇಳಿಕೆಗಳನ್ನು ನೀಡಿದ್ದು, ಇದನ್ನು ಖಂಡಿಸಿದ್ದಾರೆ.
ಆದರೆ ಗೋರಖ್ಪುರದ ಬಿಜೆಪಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯಕಾರಿ ಸದಸ್ಯರಾದ ಇರ್ಫಾನ್ ಅಹ್ಮದ್ ಅವರು, ಯೋಗಿ ಆದಿತ್ಯನಾಥ್ ಅವರು ರಾಜ್ಯ ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮ ಆಸೆ. 2017 ರ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳಿಂದ ಗೆಲ್ಲಲಿದೆ ಎಂದಿದ್ದಾರೆ.
ಕೆಲ ದಿನಗಳ ಹಿಂದೆ ರಾಹುಲ್ ಗಾಂಧಿಯವರನ್ನು ಸಿಂಘಂ ಆಗಿ ಚಿತ್ರಿಸಿದ್ದ ಪೋಸ್ಟರ್ ಅನ್ನು ಕಾಂಗ್ರೆಸ್ ಹಾಕಿತ್ತು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಈಗ ಈ ಪೋಸ್ಟರ್ ಕಾಣಿಸಿಕೊಂಡಿದೆ.
ಒಟ್ಟಿನಲ್ಲಿ ಉಭಯ ಪಕ್ಷಗಳ ನಡುವಿನ ಪೋಸ್ಟರ್ ಕಿತ್ತಾಟ ಸದ್ಯಕ್ಕಂತೂ ನಿಲ್ಲುವಂತೆ ಕಾಣುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.