ನವದೆಹಲಿ : ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪ್ರಾಣ ಬೆದರಿಕೆ ಇದ್ದು ಅವರಿಗೆ ಇನ್ನೂ ಹೆಚ್ಚಿನ ಭದ್ರತೆ ಒದಗಿಸುವಂತೆ ಕಾಂಗ್ರೆಸ್ ನಾಯಕರು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ.
ರಾಹುಲ್ ಗಾಂಧಿ ಹಾಗೂ ಇನ್ನಿತರ ಕಾಂಗ್ರೆಸ್ನ ಗಣ್ಯರಿಗೆ ಪ್ರಾಣ ಬೆದರಿಕೆ ಇದ್ದು, ಮತ್ತಷ್ಟು ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆ ಕೋರಿ ಕಾಂಗ್ರೆಸ್ ನಾಯಕರಾದ ಆನಂದ್ ಶರ್ಮಾ ಮತ್ತು ಅಹ್ಮದ್ ಪಟೇಲ್ ಅವರು ಗೃಹ ಸಚಿವ ರಾಜ್ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಇನ್ನೂ ಹೆಚ್ಚಿನ ಭದ್ರತೆ ಒದಗಿಸುವಂತೆ ಕೇಳಿಕೊಳ್ಳಲಿದ್ದಾರೆ.
ಮೇ 16 ರಂದು ಚುನಾವಣೆ ನಡೆಯಲಿರುವ ಪುದುಚೆರಿಗೆ ರಾಹುಲ್ ಗಾಂಧಿಯವರು ನಾಳೆ (ಮಂಗಳವಾರ ಮೇ 10) ರಂದು ಚುನಾವಣಾ ಪ್ರಚಾರಕ್ಕಾಗಿ ತೆರಳಲಿದ್ದಾರೆ. ಆದರೆ ರಾಹುಲ್ ಗಾಂಧಿಯವರಿಗೆ ಜೀವ ಬೆದರಿಕೆ ಒಡ್ಡುವ ಪತ್ರವೊಂದು ಇಂದು ಪುದುಚೆರಿ ಕಾಂಗ್ರೆಸ್ ಘಟಕದ ಕಾರ್ಯಾಲಯಕ್ಕೆ ಬಂದಿದ್ದು, ಇದರಲ್ಲಿ ಸಾರ್ವಜನಿಕ ಭಾಷಣದ ವೇಳೆ ರಾಹುಲ್ ಗಾಂಧಿಯವನ್ನು ಹತ್ಯೆ ಮಾಡಲಾಗುವುದು ಎಂದಿದೆ. ಈ ಪತ್ರವನ್ನು ತಮಿಳಿನಲ್ಲಿ ಬರೆಯಲಾಗಿದೆ ಎಂದು ಪುದುಚೆರಿಯ ಕಾಂಗ್ರೆಸ್ ನಾಯಕರಾದ ನಾರಾಯಣ ಸ್ವಾಮಿ ಅವರು ಹೇಳಿದ್ದಾರೆ.
ಈಗಾಗಲೇ ರಾಹುಲ್ ಗಾಂಧಿ ಮತ್ತು ಅವರ ಕುಟುಂಬದ ಇತರ ಸದಸ್ಯರಿಗೆ ವಿಶೇಷ ರಕ್ಷಣಾ ದಳದ ಭದ್ರತೆ ಇದೆ. ಜೀವ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯ ಭದ್ರತೆಗಾಗಿ ಹೆಚ್ಚಿನ ಭದ್ರತೆ ಒದಗಿಸಲು ಗೃಹ ಸಚಿವರನ್ನು ಭೇಟಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.