ನವದೆಹಲಿ : ದೆಹಲಿ ಪೊಲೀಸರ ಬೇಜವಾಬ್ದಾರಿಗೆ ಬೇಸತ್ತು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಪಿನ್ ಸಂಘಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರಿದಿದ್ದು ಸುಮೋಟೋ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕೆಂದು ಕೇಳಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಲು ವಸಂತ್ ಕುಂಜ್ಗೆ ಹೋಗುವ ಸಂದರ್ಭ ವಾಹನ ದಟ್ಟಣೆಯನ್ನು ಹೆಚ್ಚಿದ್ದು ಇದನ್ನು ನಿಯಂತ್ರಿಸಲು ಪೊಲೀಸರುಯಾರೂ ಇರಲಿಲ್ಲ.
ಈ ಬಗ್ಗೆ ಪೋಲೀಸ್ ಠಾಣೆಗೆ ಫೋನ್ ಮಾಡಿ ತಿಳಿಸಲು ಫೋನ್ ಮಾಡಿದರು ತಕ್ಷಣವೇ ೧೦೦ಕ್ಕೆ ಫೋನಾಯಿಸಿದರೂ ಯಾವುದೇ ಪ್ರತಿಕ್ರಿಯೆ ಇರಲಿಲ್ಲ ಮತ್ತು ಕರೆಗಳನ್ನು ಸ್ವೀಕರಿಸಲಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿಪಿನ್ ಸಂಘಿ ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ತಾನು ಬರೆದ ಪತ್ರವನ್ನೇ ಪಿ.ಐ.ಎಲ್ ಎಂದು ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕೆಂದು ಮುಖ್ಯ ನ್ಯಾಯಮೂರ್ತಿಯವರಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.