ಲಕ್ನೋ: ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗುತ್ತಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ನ ಅಧಿನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗಿಂತ ಹೆಚ್ಚಾಗಿ ಪ್ರಿಯಾಂಕ ವಾದ್ರಾ ಹವಾ ಬೀಸುತ್ತಿದೆ.
ದೇಶದ ಅತೀ ಹಿರಿಯ ಪಕ್ಷ ಎನಿಸಿರುವ ಕಾಂಗ್ರೆಸ್ನ 600 ಬ್ಲಾಕ್ ಅಧ್ಯಕ್ಷರು ನಮಗೆ ಪ್ರಿಯಾಂಕ ವಾದ್ರಾ ಅವರೇ ಬೇಕು, ಅವರನ್ನು ರಾಜಕೀಯಕ್ಕೆ ಕರೆ ತನ್ನಿ ಎಂದು ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.
ಈ ಬೆಳವಣಿಗೆಯನ್ನು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ. ಪ್ರಿಯಾಂಕ ಒಬ್ಬರಿಂದಲೇ ಕಾಂಗ್ರೆಸ್ನ್ನು ಉಳಿಸುವ ಶಕ್ತಿ ಇರುವುದು ಎಂದು ಇವರು ಬಲವಾಗಿ ನಂಬಿದ್ದಾರೆ ಎನ್ನಲಾಗಿದೆ.
2017ರ ಉತ್ತರಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವವನ್ನು ಪ್ರಿಯಾಂಕ ತೆಗೆದುಕೊಳ್ಳಲಿ ಎಂದು ಪ್ರಶಾಂತ್ ಕಿಶೋರ್ ಅವರು ಈ ಹಿಂದೆಯೇ ಹೇಳಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಈ ಬಗ್ಗೆ ಮೌನವಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.