ನವದೆಹಲಿ: ಶಾಸಕಾಂಗದ ಅಧಿಕಾರದ ಮೇಲೆ ನ್ಯಾಯಾಂಗ ಅತಿಕ್ರಮಣ ಮಾಡುತ್ತಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ’ಒಂದೊಂದೇ ಹಂತವಾಗಿ ಭಾರತದ ಶಾಸಕಾಂಗದ ಅಧಿಕಾರ ನಾಶವಾಗುತ್ತಿದೆ’ ಎಂದರು. ಅಲ್ಲದೇ ಬಜೆಟ್ ಮತ್ತು ತೆರಿಗೆಯ ಅಧಿಕಾರವನ್ನು ರಕ್ಷಿಸುವಂತೆ ಅವರು ಸಂಸದರಿಗೆ ಕರೆ ನೀಡಿದರು.
ಜಿಎಸ್ಟಿ ಬಿಲ್ ಮೇಲಿನ ಚರ್ಚೆಯ ವೇಳೆ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಬಿಲ್ಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರದ ನಡುವಣ ಬಿಕ್ಕಟ್ಟು ಬಗೆಹರಿಸಲು ನ್ಯಾಯಾಧೀಶರ ಮುಂದೆ ಹೋಗಬೇಕು ಎಂದು ಕಾಂಗ್ರೆಸ್ ಇಟ್ಟಿರುವ ಬೇಡಿಕೆಯ ಹಿನ್ನಲೆಯಲ್ಲಿ ಅವರು ಈ ಸಲಹೆ ನೀಡಿದ್ದಾರೆ.
ಪರಿಸ್ಥಿತಿ ಹೀಗಾದರೆ ತೆರಿಗೆಯ ಅಧಿಕಾರವೂ ನ್ಯಾಯಾಂಗಕ್ಕೆ ಹಸ್ತಾಂತರವಾದಂತಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.