ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿಯ ಪಿಂದ್ರ ಪ್ರದೇಶದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಭಾರತದ ಅರ್ಜುನನ ಪಾತ್ರದಲ್ಲಿ ಹಾಗೂ ಶರದ್ ಯಾದವ್ ಕೃಷ್ಣನ ಪಾತ್ರದಲ್ಲಿ ಇರುವಂತಹ ಪೋಸ್ಟರ್ ಹಾಗೂ ಬ್ಯಾನರ್ಗಳು ಕಂಡು ಬಂದಿವೆ.
ಈ ಪೋಸ್ಟರ್ಗಳು ‘ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ವಿರುದ್ಧ ಹಾಗೂ ನರೇಂದ್ರ ಮೋದಿ ಮತ್ತು ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ – ಜನತಾದಳ ಯುನೈಟೆಡ್ ನ ‘ಶಂಖನಾದ’ ಎಂಬ ಘೋಷಣೆಗಳನ್ನು ಹೊಂದಿದೆ.
ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಜನತಾದಳ ಯುನೈಟೆಡ್ ಗುರುವಾರ ಪಿಂದ್ರದಲ್ಲಿ ಸಮಾವೇಶ ನಡೆಸಲಿದೆ.
ಜೆಡಿಯು ಪಕ್ಷ 2019ರ ಲೋಕಸಭಾ ಚುನಾವಣೆಗೆ ನಿತೀಶ್ ಕುಮಾರ್ ಪರ ಉತ್ತರಪ್ರದೇಶದಲ್ಲಿ ಚುನಾವಣಾ ತಯಾರಿ ನಡೆಸುತ್ತಿದ್ದು, ಈ ಸಮಾವೇಶವನ್ನು ರಾಷ್ಟ್ರಮಟ್ಟದಲ್ಲಿ ಪ್ರಚಾರಗೊಳಿಸುವ ಉದ್ದೇಶ ಹೊಂದಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.