ನವದೆಹಲಿ: ಖ್ಯಾತ ವಕೀಲ ಮತ್ತು ಸ್ವರಾಜ್ ಅಭಿಯಾನದ ನಾಯಕ ಪ್ರಶಾಂತ್ ಭೂಷಣ್ ಮತ್ತು ಅವರ ಆಪ್ತ ಯೋಗೇಂದ್ರ ಯಾದವ್ ಅವರು ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಬಾಂಬ್ ಒಂದನ್ನು ಸಿಡಿಸಿದ್ದಾರೆ.
ಛತ್ತೀಸ್ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ಹೆಸರನ್ನು ಹಗರಣದಲ್ಲಿ ಎಳೆದು ತಂದಿದ್ದಾರೆ. ಈ ಮೂಲಕ ಬಿಜೆಪಿಗೆ ಇರಿಸು ಮುರಿಸು ಉಂಟು ಮಾಡಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರಿಬ್ಬರು, ಛತ್ತೀಸ್ಗಢ ಎ-109 ಹೆಲಿಕಾಫ್ಟರ್ ವಿವಾದದಲ್ಲಿ ರಮಣ್ ಸಿಂಗ್ ಪಾತ್ರವಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಅವರ ಪುತ್ರ ಅಭಿಷೇಕ್ ಅವರನ್ನು ಪನಾಮ ಪೇಪರ್ಸ್ ಲೀಕ್ ಪ್ರಕರಣದಲ್ಲಿ ಲಿಂಕ್ ಮಾಡಿದ್ದಾರೆ.
ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದಲ್ಲಿ ಯುಎಸ್ಡಿ 1.5 ಮಿಲಿಯನ್ ಕಿಕ್ಬ್ಯಾಕ್ ಪಡೆಯಲಾಗಿದೆ, ಈ ಆರೋಪಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.