ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ತಾನು ಕೇಂದ್ರದ ಒತ್ತಡಕ್ಕೆ ಒಳಗಾಗಿದ್ದೇನೆ ಎಂಬ ಎಎಪಿ ಪಕ್ಷದ ಆರೋಪವನ್ನು ದೆಹಲಿ ವಿವಿ ಉಪ ಕುಲಪತಿ ಯೋಗೇಶ್ ತ್ಯಾಗಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
ಮೋದಿಯ ಬಿಎ ಪ್ರಮಾಣ ಪತ್ರವನ್ನು ಪರಿಶೀಲಿಸುವಂತೆ ನಾವು ಮಾಡಿದ ಮನವಿಯನ್ನು ಕೇಂದ್ರದ ಒತ್ತಡಕ್ಕೆ ಮಣಿದು ದೆಹಲಿ ವಿವಿಯ ಕಲುಪತಿ ನಿರಾಕರಿಸಿದರು ಎಂದು ಎಎಪಿ ಆರೋಪಿಸಿತ್ತು.
ನಾವು ಮೋದಿ ಪ್ರಮಾಣ ಪತ್ರ ಪರಿಶೀಲಿಸಲು ತೆರಳಿದ್ದೆವು, ಅದಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೆವು, ಆದರೆ ಬರಿಗೈನಲ್ಲಿ ವಾಪಾಸ್ ಆಗಿದ್ದೇವೆ ಎಂದು ಎಎಪಿ ಹೇಳಿದೆ.
ಕೇಜ್ರಿವಾಲ್ ಮಾಡಿದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಮೋದಿಯವರ ಪ್ರಮಾಣಪತ್ರಗಳನ್ನು ಬಹಿರಂಗಪಡಿಸಿತ್ತು. ಆದರೂ ಇದನ್ನು ಒಪ್ಪದ ಕೇಂಜ್ರಿ ಇದೊಂದು ಫೇಕ್ ಸರ್ಟಿಫಿಕೇಟ್ ಎಂದಿದ್ದರು.
ಬಳಿಕ ದೆಹಲಿ ವಿವಿಯ ರಿಜಿಸ್ಟಾರ್ ಅವರೇ ಇದು ನಿಖರ ಪ್ರಮಾಣ ಪತ್ರ ಎಂದು ಸ್ಪಷ್ಟಪಡಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.