ನವದೆಹಲಿ: ದೆಹಲಿ ಪೊಲೀಸ್, ಡಿಡಿಎ, ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆ ಸೇರಿದಂತೆ ಇವೆಲ್ಲವನ್ನೂ ತನ್ನ ನಿಯಂತ್ರಣದಲ್ಲಿರಿಸಿಕೊಳ್ಳುವ ರಾಜ್ಯತ್ವ ಕರಡು ಮಸೂದೆಯನ್ನು ಬಿಡುಗಡೆಗೊಳಿಸಿದೆ. ಇದರೊಂದಿಗೆ ದೆಹಲಿಯ ಎಎಪಿ ಸರ್ಕಾರ ಕೇಂದ್ರದ ವಿರುದ್ಧ ಸಂಘರ್ಷಕ್ಕೆ ಇಳಿದಿದೆ. ಮಸೂದೆ ಕುರಿತು ಜೂ.30ರ ವರೆಗೆ ಸಾರ್ವಜನಿಕ ಸಲಹೆಗಳಿಗೆ ಆಹ್ವಾನಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ವಪಕ್ಷಗಳ ಸಭೆ ಕರೆದಿದ್ದು, ಬಿಜೆಪಿಯ ಪ್ರಣಾಳಿಕೆಯಂತೆ ಸಂಪೂರ್ಣ ರಾಜ್ಯತ್ವ ನೀಡುವ ಭರವಸೆ ಈಡೇರಿಸುವಂತೆ ಕೋರಿದೆ.
ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜ್ನಾಥ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಈ ಕುರಿತು ಭೇಟಿ ಮಾಡಲಿದ್ದು, ಮಸೂದೆಯನ್ನು ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.
ಎಎಪಿ ಸರ್ಕಾರ ಜೂ. 30 ರ ಬಳಿಕ ಇದರ ಅಂತಿಮ ಕರಡು ತಯಾರಿಸಲಿದ್ದು, ದೆಹಲಿ ವಿಧಾನಸಭೆಯಲ್ಲಿ ಜಾರಿಗೆ ತರಲಾಗುವುದು. ಸದ್ಯಕ್ಕೆ ಈ ಮಸೂದೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಗುತ್ತಿದ್ದು, ಕೇಂದ್ರವು ಸಾಂವಿಧಾನಿಕ ತಿದ್ದುಪಡಿ ತರಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇದೀಗ ಈ ಮಸೂದೆಯನ್ನು ದೆಹಲಿ ಸರ್ಕಾರದ ವೆಬ್ಸೈಟ್ಗೆ ಹಾಕಲಾಗಿದ್ದು, ವಿಧಾನಸಭೆಯ ವಿಶೇಷ ಅಧಿವೇಶದಲ್ಲಿ ಇದನ್ನು ಜಾರಿಗೆ ತರಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.