ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಕಾಂಗ್ರೆಸ್ ಬಗ್ಗೆ ಅದರ ನಾಯಕರೇ ಅಸಮಾಧಾನಕ್ಕೊಳಗಾಗಿದ್ದಾರೆ. ಸೋಲಿನ ಪರಾಮರ್ಶೆಗಿಂತಲೂ ಅಧಿಕವಾದುದನ್ನು ಮಾಡಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
’ಈ ಫಲಿತಾಂಶ ನಮಗೆ ಬೇಸರ ತಂದಿದೆ, ಆದರೆ ಇದು ಅನಿರೀಕ್ಷಿತ ಫಲಿತಾಂಶವಲ್ಲ. ಈಗಾಗಲೇ ಸಾಕಷ್ಟು ಪರಾಮರ್ಶೆಗಳನ್ನು ನಾವು ಮಾಡಿಕೊಂಡಿದ್ದೇವೆ ಇದಕ್ಕಿಂತಲೂ ಮೇಜರ್ ಸರ್ಜರಿಯನ್ನು ಈಗ ಮಾಡುವ ಅಗತ್ಯವಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ.
2014ರ ಲೋಕಸಭೆಯ ಸೋಲಿನ ಬಳಿಕ ಎಐಸಿಸಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
ಎಐಸಿಸಿಯಲ್ಲಿ ಮಹತ್ವದ ಬದಲಾವಣೆಯ ಅಗತ್ಯವಿದೆ ಎಂದು ಮಾತುಗಳು ಕೇಳಿ ಬರುತ್ತಿರುವ ಈ ಕಾಲದಲ್ಲಿ ದಿಗ್ವಿಜಯ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.