ಮಂಗಳೂರು : ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ಮೇ ೨೯ರಂದು ಭಾನುವಾರ ಸಂಜೆ ೪.೩೦ಕ್ಕೆ ಅಭಿನಂದನಾ ಸಮಾರಂಭ ಮತ್ತು ವಿದ್ಯಾರ್ಥಿ ವೇತನ ವಿತರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬಯಿ ಚರೀಷ್ಮಾ ಬಿಲ್ಡರ್ಸ್ನ ಆಡಳಿತ ನಿರ್ದೇಶಕ ಸುಧೀರ್ ವಿ. ಶೆಟ್ಟಿ, ಬೆಂಗಳೂರು ಎಂ.ಆರ್.ಜಿ. ಗ್ರೂಪ್ನ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ, ಬಂಟರ ಮಾತೃ ಸಂಘದ ಜತೆ ಕಾರ್ಯದರ್ಶಿ ಕಾವು ಹೇಮನಾಥ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ದೇವಾನಂದ ಶೆಟ್ಟಿ, ಎಂ.ಜೆ. ಶೆಟ್ಟಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರ ಗಳಲ್ಲಿ ಸಾಧನೆಗೈದವರನ್ನು ಗೌರವಿಸಲಾಗುವುದು. ಹಾಗೂ ವಿಧವೆಯರಿಗೆ, ಭಿನ್ನ ಸಾಮರ್ಥ್ಯದವರಿಗೆ, ವಿಕಲ ಚೇತನರಿಗೆ ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿಯಲ್ಲಿ 600 ಅಂಕಗಳಿಗಿಂತ ಹೆಚ್ಚು ಹಾಗೂ ದ್ವಿತೀಯ ಪಿಯುಸಿಯಲ್ಲಿ 575ಕ್ಕಿಂತ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಾಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಪ್ರದರ್ಶನ ಜರಗಲಿದೆ.
ಮಹಾಸಭೆ : ಸುರತ್ಕಲ್ ಬಂಟರ ಸಂಘದ 16ನೇ ವಾರ್ಷಿಕ ಮಹಾಸಭೆ ಮೇ 29 ರಂದು ಭಾನುವಾರ 2:30ಕ್ಕೆ ನಡೆಯಲಿದೆ. ಸಂಘದ ವ್ಯಾಪ್ತಿಗೆ ಒಳಪಟ್ಟ ಗ್ರಾಮದ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಸೀತಾರಾಮ ರೈ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.