ನವದೆಹಲಿ: ಕೇಂದ್ರದಲ್ಲಿ ಮೋದಿ ಸರ್ಕಾರ ಎರಡು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಿದೆ. ಈ ಸಂದರ್ಭ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ’ನಾನು ವಾಸ್ತವವಾಗಿ ಗರಿಷ್ಠ ಮಟ್ಟದಲ್ಲಿ ಸುಧಾರಣೆಗಳನ್ನು ಕೈಗೊಂಡಿದ್ದೇನೆ. ನಾನು ಇನ್ನು ಮುಂದೆಯೂ ಅಪಾರ ಸುಧಾರಣೆಗಳನ್ನು ತರುವ ಗುರಿ ಹೊಂದಿದ್ದೇನೆ. ದೇಶದ ಅಭ್ಯುದಯಕ್ಕಾಗಿ ಇನ್ನೂ ಬಹಳಷ್ಟು ಶ್ರಮಿಸಲಿದ್ದೇನೆ’ ಎಂದು ಹೇಳಿದ್ದಾರೆ.
ನಾನು ತಂದ ಬದಲಾವಣೆಗಳನ್ನು ಜಾರಿಗೊಳಿಸಲು ಹಿಂದಿನ ಸರ್ಕಾರಗಳಿಗೆ ಸುಲಭವಲ್ಲದ ಕಾರ್ಯವೆನಿಸಿದೆ. ದೇಶದ ಆರ್ಥಿಕತೆಯನ್ನು ಹೆಚ್ಚಿಸಲು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಭ್ರಷ್ಟಾಚಾರವನ್ನು ತಡೆಗಟ್ಟಲು ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ವ್ಯಾಪಾರ-ವಹಿವಾಟುಗಳನ್ನು ಸುಲಭಗೊಳಿಸಲು ಗ್ರಾಮೀಣ ಮೂಲಸೌಕರ್ಯಗಳಲ್ಲಿ ಸುಧಾರಣೆಗಳನ್ನು ತರಲಾಗಿದೆ ಎಂದು ಮೋದಿ ಅವರು ಹೇಳಿದ್ದಾರೆ.
ರಾಜ್ಯಗಳಲ್ಲಿ ತೆರಿಗೆ ವ್ಯವಸ್ಥೆ ಬದಲಿಗೆ ವ್ಯಾಪಾರ ಸ್ನೇಹಿ ರಾಷ್ಟ್ರೀಯ ತೆರಿಗೆ, ಸರಕು ಮತ್ತು ಸೇವೆ (ಜಿಎಸ್ಟಿ) ಬಿಲ್ ಜಾರಿಗೊಳಿಸುವ ಮೂಲಕ ಈ ವರ್ಷ ಪ್ರಮುಖ ಸುಧಾರಣೆಗಳನ್ನು ತರುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.
ಇಂದು ಭಾರತವು ಈ ಹಿಂದಿನಂತೆ ಮೂಲೆ ಗುಂಪಾಗದೇ ಜಗತ್ತಿಗೆ ಕೇಂದ್ರ ಬಿಂದುವಾಗಿದೆ ಎಂದು ಮೋದಿ ಅವರು ಹೇಳಿದ್ದಾರೆ.
ಮುಂದಿನ ತಿಂಗಳು ಪ್ರಧಾನಿ ಮೋದಿ ಅವರು ಅಮೇರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೇರಿಕ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ಅಮೇರಿಕ ಕಾಂಗ್ರೆಸ್ನ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.