ನವದೆಹಲಿ : ಕಾರ್ಮಿಕ ಭವಿಷ್ಯನಿಧಿಯಡಿ ನೀಡಲಾಗುತ್ತಿರುವ ವಿಮೆಮೊತ್ತ 3.6 ಲಕ್ಷ ದಿಂದ 6 ಲಕ್ಷಕ್ಕೆ ಏರಿಕೆ ಮಾಡಲು ಇಪಿಎಫ್ಒ ಪ್ರಸ್ತಾವನೆ ಕಳುಹಿಸಿದ್ದು, ಶ್ರೀಫ್ರದಲ್ಲೇ ಪ್ರಕಟವಾಗುವ ಸಾಥ್ಯತೆಗಳಿವೆ ಎಂದು ಕಾರ್ಮಿಕ ಖಾತೆ ಸಚಿವ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.
ಪ್ರಸ್ತುತ ಕಾರ್ಮಿಕ ಭವಿಷ್ಯನಿಧಿಯಡಿ ನೀಲಾಗುತ್ತಿರುವ ವಿಮೆಮೊತ್ತ 3.6 ಲಕ್ಷವಾಗಿದ್ದು ಅದನ್ನು 6 ಲಕ್ಷಕ್ಕೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಇಲಾಖೆಯಲ್ಲಿ ಪರಿಶೀಲನೆಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ. ಇದರಿಂದ 4 ಕೋಟಿ ನೌಕರರಿಗೆ ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೇ 8.8% ಬಡ್ಡಿ ನೀಡುವ ಅಧಿಸೂಚನೆಯೂ ಶೀಘ್ರವೇ ಪ್ರಕಟಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.