ನವದೆಹಲಿ: ತಮ್ಮ ಸರ್ಕಾರದ ಎರಡು ವರ್ಷಗಳ ಸಾಧನೆಗಳನ್ನು ವಿಶ್ಲೇಷಣೆ ಮಾಡಿರುವ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಇಮೇಜ್ ಸುಧಾರಣೆಯಾಗಿದೆ ಎಂದಿದ್ದಾರೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, 2019ರ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ಉತ್ತಮ ಪ್ರದರ್ಶನ ನೀಡಲಿದೆ. ಇದನ್ನು ಇತ್ತೀಚಿಗೆ ನಡೆದ ಕೆಲ ಸಮೀಕ್ಷೆಗಳೂ ಸಾಬೀತುಪಡಿಸಿವೆ ಎಂದಿದ್ದಾರೆ.
ಮುಂಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಅತ್ಯಂತ ಪ್ರಾಮುಖ್ಯ ಮುಖಗಳನ್ನೇ ನಾವು ಕಣಕ್ಕಿಳಿಸಲಿದ್ದೇವೆ, ಜನರಿಗೆ ಸಮಾಜವಾದಿ ಪಕ್ಷದಿಂದ ನಿರಾಸೆಯಾಗಿದೆ. ಅವರು ಬದಲಾವಣೆ ಬಯಸುತ್ತಿದ್ದಾರೆ ಎಂದರು.
ಪಾಕ್ ಬಗ್ಗೆ ಮಾತನಾಡಿದ ಅವರು, ನಾವು ಅವರನ್ನು ತಲುಪಲು ಪ್ರಯತ್ನಿಸಿದೆವು ಆದರೆ ಅವರು ನಿರಾಕರಿಸಿದರು ಎಂದರು.
ಜೆಎನ್ಯು ಘಟನೆ ಬಗ್ಗೆ ಮಾತನಾಡಿದ ಅವರು, ದೇಶವನ್ನು ಒಡೆಯುವ ಯಾವುದೇ ಕಾರ್ಯವನ್ನು ನಾವು ಸಹಿಸೋದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.