ವಿಜಯವಾಡ: ಅಸ್ಸಾಂನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಗಡಿಯನ್ನು ಭದ್ರಗೊಳಿಸಲು ಚಿಂತನೆ ನಡೆಸಲಾಗಿದ್ದು, ಈ ಮೂಲಕ ಒಳನುಸುಳುವಿಕೆ ತಡೆಯಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ತಿಳಿಸಿದ್ದಾರೆ.
ಭಾರತ ಮತ್ತು ಬಾಂಗ್ಲಾ ಗಡಿಗಳಲ್ಲಿ ಭಾರತದ ಬಿಎಸ್ಎಫ್ ಮತ್ತು ಬಾಂಗಾದೇಶದ ಬಿಡಿಆರ್ ಪಡೆಗಳು ಗಸ್ತು ತಿರುಗಲಿವೆ. ಅಲ್ಲದೇ ಚುನಾವಣಾ ಸಂದರ್ಭ ಸರ್ಬಾನಂದ ಸೋನೋವಾಲ್ ಅವರು ಎರಡು ವರ್ಷದಲ್ಲಿ ಒಳನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲಾಗುವುದು ಎಂಬ ಭರವಸೆ ನೀಡಿದ್ದರು. ಅದರಂತೆ ಅದನ್ನು ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ.
ಬಾಂಗ್ಲಾದೇಶದ ಅಕ್ರಮ ವಲಸಿಗರು ಮತ್ತು ನುಸುಳುಕೋರರಿಂದ ಭಾರತದ ಸಾಂಸ್ಕೃತಿಕತೆ ಮತ್ತು ಜನಸಂಖ್ಯೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ನಾಗರಿಕ ದಾಖಲಾತಿ (ಎನ್ಆರ್ಸಿ) ಮೂಲಕ ರಾಜ್ಯದಲ್ಲಿರುವ ಅಕ್ರಮ ವಲಸಿಗರನ್ನು ಗುರುತಿಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಸರಕಾರ ಚಿಂತನೆ ನಡೆಸಿದೆ ಎಂದು ರಾಮ್ಮಾಧವ್ ಅವರು ಹೇಳಿದ್ದಾರೆ.
ಪೂರ್ವಾಂಚಲ ರಾಜ್ಯಗಳಲ್ಲಿ 2017 ಮತ್ತು 2019ರಲ್ಲಿ ಚುನಾವಣೆಗಳು ನಡೆಯಲಿದ್ದು, ಪ್ರಸ್ತುತ ತಾನು ಅಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಯೋಜನೆಗಳನ್ನು ರೂಪಿಸುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೇ ಇಲ್ಲಿಯ ಆರು ಜನಾಂಗಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಒತ್ತಾಯಿಸಲಾಗಿದ್ದು, ಇದನ್ನು 2021 ರ ಜನಗಣತಿ ಆಧಾರದ ಮೇಲೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.