ನವದೆಹಲಿ: ಕನ್ನಡ ಕಲಿಯುತ್ತೇನೆ, ಕರ್ನಾಟಕದ ಹಿತಾಸಕ್ತಿಗೆ ಅನುಗುಣವಾಗಿ ಸೇವೆ ಮಾಡುತ್ತೇನೆ ಎಂದು ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸುತ್ತಿರುವ ಕೇಂದ್ರ ವಾಣಿಜ್ಯ ಸಂಸ್ಥೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
’ಕನ್ನಡ ನನಗೆ ಸ್ವಲ್ಪ ಸ್ವಲ್ಪ ಬರುತ್ತದೆಯಾದರೂ ಕನ್ನಡವನ್ನು ಸಂಪೂರ್ಣ ಮಾತನಾಡಲು ಕಲಿಯುತ್ತೇನೆ’ ಎಂದು ತಮಿಳುನಾಡು ಮೂಲದವರಾದ ಸೀತಾರಾಮನ್ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡುವ ವೇಳೆ ನುಡಿದಿದ್ದಾರೆ.
ಈ ಹಿಂದೆ ಅವರು ಆಂಧ್ರದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು, 2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರ ಅವಧಿ ಮುಕ್ತಾಯವಾಗಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಆಂಧ್ರದವರಾದ ವೆಂಕಯ್ಯ ನಾಯ್ಡು ಅವರಿಗೆ ಮತ್ತೆ ಕರ್ನಾಟಕದಿಂದ ಸೀಟು ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡಿಗರು ಅವರ ವಿರುದ್ಧ ಅಭಿಯಾನವನ್ನೇ ಆರಂಭಿಸಿದ್ದರು. ಇದೀಗ ಅವರ ಬದಲು ತಮಿಳುನಾಡಿನವರಾದ ನಿರ್ಮಲಾ ಅವರಿಗೆ ಸೀಟು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.