News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸರಕಾರ ಪೋಲಿಸರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ

K-Monappa-Bhandaryಮಂಗಳೂರು : ರಾಜ್ಯ ಸರಕಾರಿ ನೌಕರರ ಮತ್ತು ಪೋಲಿಸರ ನ್ಯಾಯಯುತ ಬೇಡಿಕೆಗಳನ್ನು ಪರಿಶೀಲಿಸಿ, ಪರಿಹರಿಸಿಕೊಳ್ಳಬೇಕಾಗಿದ್ದ ರಾಜ್ಯ ಸರಕಾರ ನೌಕರರ ಮತ್ತು ಪೋಲಿಸರ ಪ್ರತಿಭಟನೆಯ ಧ್ವನಿಯನ್ನೇ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ಪೋಲಿಸರು ಸಮಯದ ನಿರ್ಬಂಧವಿಲ್ಲದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರಕಾರ ಮಾತುಕತೆ ನಡೆಸಿ ಅವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಮುಂದಾಗಬೇಕಾಗಿತ್ತು. ಆದರೆ ‘ಎಸ್ಮಾ’ ದಂತಹ ಅಸ್ತ್ರವನ್ನು ಬಳಸುವ ಬೆದರಿಕೆ ಒಡ್ಡಿ, ಆರಕ್ಷಕರು ಪ್ರತಿಭಟನೆ ನಡೆಸುವಂತಿಲ್ಲ ಎನ್ನುತ್ತಿರುವುದು ಪೋಲಿಸರ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಮತ್ತು ದಬ್ಬಾಳಿಕೆ ಎಂದು ಅವರು ಟೀಕಿಸಿದ್ದಾರೆ.

ಪ್ರಜಾಸತಾತ್ಮಕ ರೀತಿಯ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳು ಈ ರೀತಿ ಬೆದರಿಕೆ ಒಡ್ಡುವ ಬದಲು ಸಂಧಾನ ಅಥವಾ ಕೆಲವಾರು ಬೇಡಿಕೆಗಳನ್ನಾದರೂ ಈಡೇರಿಸುವ ಮೂಲಕ ಪ್ರತಿಭಟನೆಯನ್ನು ತಡೆಯಬಹುದಾಗಿತ್ತು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top