News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎ. 26 ರಂದು ನೂತನ ರಾಷ್ಟ್ರೀಯ ಬಿಲ್ಲವ ಭವನ ಲೋಕಾರ್ಪಣೆ

Mangalore NEWSಮುಲ್ಕಿ: ಸಮಾಜದ ಪ್ರತಿಷ್ಠಿತ ಸಂಸ್ಥೆಯಾಗಿರುವ ಮುಲ್ಕಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ನೂತನ ರಾಷ್ಟ್ರೀಯ ಬಿಲ್ಲವ ಭವನವು ಬಪ್ಪಬ್ಯಾರಿ ರಸ್ತೆಯ ಪಂಚಮಹಲ್‌ನ ಜಯ ಸಿ. ಸುವರ್ಣ ಕಾಂಪೌಂಡ್‌ನಲ್ಲಿ ಸುಮಾರು 3 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ಅಂತಸ್ಥಿನ ಕಟ್ಟಡ ವಿಶಾಲ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ ಎಪ್ರಿಲ್ 26 ರಂದು ರವಿವಾರ ಲೋಕಾರ್ಪಣೆಗೊಳ್ಳಲಿದೆ ಎಂದು ಮುಲ್ಕಿ ರಾಷ್ಟ್ರೀಯ ಬಿಲ್ಲವ ಮಹಾ ಡಲದ ವಕ್ತಾರ ಹರಿಕೃಷ್ಣ ಬಂಟ್ವಾಳ್ ತಿಳಿಸಿದರು.

ಈ ಬಗ್ಗೆ ಮುಲ್ಕಿ ಬಿಲ್ಲವ ಸಂಘದಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕೇಂದ್ರ ಮಾಜೀ ಸಚಿವ ಹಾಗೂ ಬಿಲ್ಲವ ಸಮಾಜದ ಹಿರಿಯ ನಾಯಕ ಬಿ.ಜನಾರ್ಧನ ಪೂಜಾರಿಯವರು ಏ. 26 ರಂದು ಬೆಳಗ್ಗೆ 9 ಗಂಟೆಗೆ ರಾಷ್ಟ್ರೀಯ ಬಿಲ್ಲವ ಭವನವನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ. ಅಲ್ಲದೆ, ನಂತರ ಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಬಳಿ ಏರ್ಪಡಿಸಲಾಗುವ ಸಭಾ ಕಾರ್ಯಕ್ರಮವನ್ನೂ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಕಟ್ಟಡದ ರುವಾರಿ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಬೆಳ್ತಂಗಡಿ ಕನ್ಯಾನ ಶ್ರೀ ರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಕೇರಳ ಶಿವಗಿರಿ ಮಠದ ಸತ್ಯಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಮಾರಂಭದಲ್ಲಿ ದ.ಕ. ಉಸ್ತುವಾರಿ ಸಚಿವ ಹಾಗೂ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ರಾಜ್ಯ ಸಚಿವ ರಮಾನಾಥ ರೈ, ರಾಜ್ಯ ನಗರಾಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಯುವಜನ, ಕ್ರೀಡಾ ಹಾಗೂ ಮೀನುಗಾರಿಕಾ ಸಚಿವ ಅಭಯಚಂದ್ರಜೈನ್, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ವಸಂತ ಬಂಗೇರಾ, ವಿ.ಸುನಿಲ್ ಕುಮಾರ್, ಗೋಪಾಲ ಪೂಜಾರಿ, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜೀ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಚಲನ ಚಿತ್ರ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಜಯಮಾಲಾ, ಮಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ಪುರೋತ್ತಮ ಚಿತ್ರಾಪುರ, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಬಂಗೇರ ಮೊದಲಾದವರು ಉಪಸ್ಥಿತರಿರುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮುಲ್ಕಿ ಇದರ ಅಧ್ಯಕ್ಷ ಜಯ.ಸಿ ಸುವರ್ಣ, ಉಪಾಧ್ಯಕ್ಷರುಗಳಾದ ಪ್ರಭಾಕರ ಬಂಗೇರ ಕಾರ್ಕಳ, ಪಿತಾಂಬರ ಹೆರಾಜೆ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಮೋಹನ್ ದಾಸ್ ಪಾವೂರು ಭಂಡಾರಮನೆ, ಸಹಕಾರ್ಯದರ್ಶಿ ಗಣೇಶ್ ಎಲ್. ಪೂಜಾರಿ ಬೈದೂರು, ಕೋಶಾಧಿಕಾರಿ ಯು.ನಾರಾಯಣ ಉಡುಪಿ, ಸಹ ಕೋಶಾಧಿಕಾರಿ ಸದಾಶಿವ ಪಿ.ಆರ್ ಎನ್.ಆರ್.ಪುರ, ಕ್ರೀಡಾ ಸಂಚಾಲಕ ಯೋಗೀಶ್ ಕುಮಾರ್ ಬೆಳ್ತಂಗಡಿ, ವಕ್ತಾರ ಹರಿಕೃಷ್ಣ ಬಂಟ್ವಾಳ್, ಪತ್ರಿಕಾ ಸಂಪಾದಕ ಸರೇಂದ್ರ ಕೆರೆಕಾಡು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top