ಮಂಗಳೂರು : ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿ ದೇಶವನ್ನು ಪರಮೋಚ್ಚ ಸ್ಥಾನಕ್ಕೆ ಕೊಂಡೊಯ್ಯುತ್ತಿರುವ ಈ ಸುಸಂದರ್ಭದಲ್ಲಿ ಮಂಗಳೂರಿನ ಪುರಭವನದಲ್ಲಿ ಜೂ. 8 ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್ ಸಮಾವೇಶ ವಿಕಾಸಪರ್ವ ನಡೆಯಲಿದೆ ಜಿಲ್ಲಾಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಜನತೆಗೆ ಶಕ್ತಿ ತುಂಬುವ ಆರ್ಥಿಕವಾಗಿ ಜೀವನಕ್ಕೆ ಭದ್ರತೆಯನ್ನು ನೀಡುವ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಹಮ್ಮಿಕೊಂಡಿದೆ. ಸ್ವಚ್ಛ ಸಮೃದ್ಧ ಭ್ರಷ್ಟಾಚಾರ ರಹಿತ ಶಕ್ತಿಶಾಲಿ ಭಾರತಕ್ಕಾಗಿ ಮೋದಿಯವರೊಂದಿಗೆ ಹೆಗಲಿಗೆ ಹೆಗಲುಕೊಟ್ಟು ಮುಂದುವರಿಯಬೇಕಾದ ದಿನಗಳಿವು ಎಂದ ಸಂದೇಶವನ್ನು ನೀಡಲು ದೇಶಾದ್ಯಂತ ಸಂಕಲ್ಪ ಪರ್ವವನ್ನು ಆರಂಭಿಸಿದೆ.
ಕೇಂದ್ರ ವಾಣಿಜ್ಯ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ , ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹರಿಭಾಯಿ ಪಿ. ಚೌಧರಿ, ಸಾಂಸದ ನಳೀನ್ ಕುಮಾರ್ ಕಟೀಲು, ಎಸ್.ಸಿ.ಮೋರ್ಚಾ ಮಾಜಿ ರಾಷ್ಟ್ರೀಯ ಅಧ್ಯಕ್ಷ ದುಶ್ಯಂತ್ ಕುಮಾರ್ ಗೌತಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಎಸ್.ಅಂಗಾರ, ಗಣೇಶ್ ಕಾರ್ನಿಕ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲೆಯ ಮಾಜಿ ಶಾಸಕರುಗಳು ಹಾಗು ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.