ಮಥುರಾ: ಮಥುರಾದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಸಾವಿಗೀಡಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಭಾನುವಾರ ಅಸುನೀಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜವಾಹಾರ್ ಬಾಗ್ನಲ್ಲಿ ಗುರುವಾರ ಪೊಲೀಸ್ ಮತ್ತು ಭೂ ಅತಿಕ್ರಮಣಕಾರರ ನಡುವೆ ನಡೆದ ಕಲಹದಲ್ಲಿ 29 ಮಂದಿ ಮೃತರಾಗಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಘಟನೆಯ ಹಿನ್ನಲೆಯಲ್ಲಿ ಆಜಾದ್ ಭಾರತ್ ವೈದಿಕ್ ವೈಚಾರಿಕ್ ಕ್ರಾಂತಿ ಪಂಥದ ಒಟ್ಟು 3 ಸಾವಿರ ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪಂಥದವರೇ ಅತಿಕ್ರಮಣಕ್ಕೆ ಮುಂದಾಗಿದ್ದರು ಎನ್ನಲಾಗಿದೆ.
ಘಟನೆಯ ಬಗ್ಗೆ ಸಿಬಿಐ ತನಿಖೆ ನಡೆಸಲು ಶಿಫಾರಸ್ಸು ಮಾಡುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ಅವರಿಗೆ ಸವಾಲು ಹಾಕಿದ್ದಾರೆ.
ಅಖಿಲೇಶ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 2 ವರ್ಷದಿಂದ 3 ಸಾವಿರ ಮಂದಿ ಭೂ ಅತಿಕ್ರಮಣ ನಡೆಸಿದರೂ ಯುಪಿ ಸರ್ಕಾರ ಕಣ್ಣು ಮುಚ್ಚಿ ಕುಳಿತಿತ್ತು ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.