ನವದೆಹಲಿ: ಇತ್ತೀಚಿಗೆ ಮಥುರಾದಲ್ಲಿ ನಡೆದ ಹಿಂಸಾಚಾರಕ್ಕೆ ಉತ್ತರಪ್ರದೇಶದ ಅಖಿಲೇಶ್ ಸಿಂಗ್ ಯಾದವ್ ಅವರ ಸರ್ಕಾರವೇ ಹೊಣೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು, ಎಗ್ಗಿಲ್ಲದೆ ನಡೆಯುತ್ತಿರುವ ಭೂ ಅತಿಕ್ರಮಣವನ್ನು ತಡೆಯಲು ನಮಗೆ ಇ-ಮೇಲ್ ಮಾಡಿ ಎಂದು ಅಲ್ಲಿನ ಜನರಿಗೆ ಕರೆ ನೀಡಿದ್ದಾರೆ.
ಜವಾಹಾರ್ ಬಾಗ್ನಲ್ಲಿ ಪೊಲೀಸರು ಮತ್ತು ಸುಭಾಷ್ ಸೇನಾ ಎಂಬ ಭೂ ಅತಿಕ್ರಮಣಕಾರರ ನಡುವೆ ನಡೆದ ಸಂಘರ್ಷದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 29 ಮಂದಿ ಬಲಿಯಾಗಿದ್ದರು, ಹಲವಾರು ಮಂದಿ ಗಾಯಗೊಂಡಿದ್ದರು.
ಈ ಘಟನೆಯನ್ನು ಖಂಡಿಸಿರುವ ಅಮಿತ್ ಷಾ, ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಅಖಿಲೇಶ್ ಅವರು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಯುಪಿನಲ್ಲಿ ಒಟ್ಟು 6 ಸಿಎಂಗಳಿದ್ದಾರೆ ಎಂದಿದ್ದಾರೆ. ಅಲ್ಲದೇ ಗೂಂಡಾಗಳು ಪೊಲೀಸರ ಮೇಲೆಯೇ ಗುಂಡು ಹಾರಿಸಲು ಸಾಧ್ಯವಾಗಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೇ ಭೂ ಅತಿಕ್ರಮಣ ಮಾಡುವವರ ವಿರುದ್ಧ ನಮ್ಮ ಪಕ್ಷ ಅಭಿಯಾನ ಆರಂಭಿಸಲಿದ್ದು, ಮಾಹಿತಿಯಿದ್ದರೆ ನಮಗೆ ಇ-ಮೇಲ್ ಮಾಡಿ, ನಾವು ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.