ನವದೆಹಲಿ: ಶನಿವಾರ 57 ರಾಜ್ಯಸಭಾ ಸ್ಥಾನಗಳಿಗಾಗಿ 15 ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಇದೀಗ ಎಲ್ಲಾ ಪಕ್ಷಗಳು ತಮ್ಮ ಲೆಕ್ಕಚಾರ ಸರಿಯಾಗಿಯೇ ಇದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದರಲ್ಲಿ ಮಗ್ನವಾಗಿವೆ.
ಉತ್ತರಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಬೆಂಬಲದೊಂದಿಗೆ ಒಟ್ಟು 11 ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದೆ, ಕಾಂಗ್ರೆಸ್ನ ಏಕೈಕ ಅಭ್ಯರ್ಥಿ ಕಪಿಲ್ ಸಿಬಲ್ ಇದೀಗ ಬಿಎಸ್ಪಿ ಮತ್ತಯ ಆರ್ಎಲ್ಡಿ ಬೆಂಬಲಕ್ಕೆ ಹಾತೊರೆಯುತ್ತಿದ್ದಾರೆ.
ಮಧ್ಯಪ್ರದೇಶದಲ್ಲೂ ಬಿಜೆಪಿ ದೊಡ್ಡ ಸಂಖ್ಯೆ ಗೆಲ್ಲುವ ವಿಶ್ವಾಸದಲ್ಲಿದೆ. ಅದರ ಇಬ್ಬರು ಅಭ್ಯರ್ಥಿಗಳು ಸುಲಭವಾಗಿ ಜಯಿಸುವುದು ಖಚಿತ. ಮೂರನೇ ಅಭ್ಯರ್ಥಿ ಕಾಂಗ್ರೆಸ್ನಿಂದ ಪ್ರಬಲ ಪೈಪೋಟಿ ಎದುರಿಸಬೇಕಾಗಿದೆ.
ಜಾರ್ಖಾಂಡ್ನಲ್ಲೂ ಬಿಜೆಪಿಯ ಮುಕ್ತಾರ್ ಅಬ್ಬಾಸ್ ನಖ್ವಿ ಜಯ ಖಚಿತ, ಆದರೆ ಮತ್ತೊಬ್ಬ ಅಭ್ಯರ್ಥಿ ಕಾಂಗ್ರೆಸ್ ಸ್ಪರ್ಧೆಯನ್ನು ಎದುರಿಸಬೇಕಾಗಿದೆ.
ಕರ್ನಾಟಕದಲ್ಲೂ ಬಿಜೆಪಿ ಗೆಲ್ಲುವ ನಿರೀಕ್ಷೆ ಇದೆ. ಆದರೆ ಜೆಡಿಎಸ್, ಕಾಂಗ್ರೆಸ್ ಸ್ಪರ್ಧೆ ಎದುರಿಸಬೇಕಾಗಿದೆ. ಹರಿಯಾಣದಲ್ಲೂ ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.