ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ದೆಹಲಿ ಸರ್ಕಾರದ ’ದ್ವಿ ಕಛೇರಿ ಮಸೂದೆ’ ಅಥವಾ ಲಾಭದಾಯಕ ಕಛೇರಿ ಕಾನೂನಿಗೆ ಅಂಕಿತ ಹಾಕಲು ಸೋಮವಾರ ನಿರಾಕರಿಸಿದ್ದಾರೆ. ಇದು ಎಎಪಿ ಸರ್ಕಾರಕ್ಕೆ ತೀವ್ರ ಮುಖಭಂಗವನ್ನು ಉಂಟುಮಾಡಿದೆ. ಅಲ್ಲದೇ ಅದರ 21 ಶಾಸಕರ ಭವಿಷ್ಯವನ್ನು ಅತಂತ್ರಗೊಳಿಸಿದೆ.
ಕಳೆದ ವರ್ಷ ತನ್ನ 21 ಶಾಸಕರನ್ನು ಎಎಪಿ ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿತ್ತು. ಆದರೆ ಆಯ್ಕೆಗೊಂಡ ಶಾಸಕ ಲಾಭದಾಯಕ ಕಛೇರಿಯನ್ನು ಹೊಂದುವುದು ಸಂವಿಧಾನದ ಉಲ್ಲಂಘನೆಯಾಗಿದೆ.
ದೆಹಲಿ ಸರ್ಕಾರ ಸೃಷ್ಟಿಸಿದ್ದ 21 ಅಸಂವಿಧಾನಿಕ ಹುದ್ದೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಶಾಂತ್ ಪಟೇಲ್ ಎಂಬುವವರು ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದರು.
ಇದೀಗ ರಾಷ್ಟ್ರಪತಿ ತಿರಸ್ಕಾರದಿಂದ ಸಂಸದೀಯ ಕಾರ್ಯದರ್ಶಿಗಳು ಅಮಾನತುಗೊಳ್ಳಲಿದ್ದಾರೆ. ಅಲ್ಲದೇ ವಿಷಯವನ್ನು ಚುನಾವಣಾ ಆಯೋಗದ ಪರಿಶೀಲನೆಗೆ ರಾಷ್ಟ್ರಪತಿ ನೀಡಿದ್ದಾರೆ.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ ಪ್ರಹಾರ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.