ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ತಮಿಳುನಾಡಿನಂತಹ ರಾಜ್ಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಜಯಲಲಿತಾ ಅವರು 29 ಬೇಡಿಕೆಗಳುಳ್ಳ ಮನವಿ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತಮಿಳುನಾಡು ಹೊರತುಪಡಿಸಿ ಎಲ್ಲಾ ರಾಜ್ಯಗಳು ಜಿಎಸ್ಟಿಯನ್ನು ಬೆಂಬಲಿಸಿವೆ ಅಥವಾ ಸಮ್ಮತಿಸಿವೆ. ಆದರೆ ತಮಿಳುನಾಡು ಮಾತ್ರ ತನ್ನದೇ ಮೀಸಲಾತಿಯನ್ನು ಉಳಿಸಿಕೊಂಡಿದೆ ಮತ್ತು ಸಲಹೆಗಳನ್ನು ನೀಡುತ್ತಿದೆ ಎಂದು ಹೇಳಿದ್ದರು.
ಇದಕ್ಕುತ್ತರಿಸಿದ ಜಯಲಲಿತಾ, ಜಿಎಸ್ಟಿ ರಾಜ್ಯದ ಆರ್ಥಿಕ ಸ್ವಾಯತ್ತತೆ ಮೇಲೆ ಪರಿಣಾಮ ಬೀರುತ್ತದೆ. ಸರಕು ಉತ್ಪಾದನೆ ರಾಜ್ಯವಾಗಿರುವ ತಮಿಳುನಾಡು ಆದಾಯದಲ್ಲಿ ದೊಡ್ಡ ನಷ್ಟವನ್ನೇ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಿಎಸ್ಟಿ ಬಿಲ್ನಲ್ಲಿ ಎಐಎಡಿಎಂಕೆ ಪಕ್ಷದ ತಿದ್ದುಪಡಿಗಳನ್ನು ಒಪ್ಪಿಕೊಳ್ಳಬೇಕು. ತಮಿಳುನಾಡಿನ ಜನರ ಕಾಳಜಿಗಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ಬಿಲ್ನಲ್ಲಿ ತರಬಾರದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈ ಸಂದರ್ಭ ಕರ್ನಾಟಕದ ಮೇಕೆದಾಟು ಯೋಜನೆಗೆ ತಡೆ, ಕಾವೇರಿ ನೀರು ಹಂಚಿಕೆ ವಿವಾದ ಕುರಿತಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.