ನವದೆಹಲಿ : ಪಂಜಾಬ್ ಕಾಂಗ್ರೆಸ್ನ ಉಸ್ತುವಾರಿ ಸ್ಥಾನಕ್ಕೆ ಕಮಲ್ನಾಥ್ ಅವರು ರಾಜೀನಾಮೆ ನೀಡಿದ್ದಾರೆ.
1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಾಗಿದೆ. ಇದು ಸ್ಥಳೀಯ ಸಮಸ್ಯೆಗಳನ್ನು ಮುಚ್ಚಿ ಹಾಕಲು ಕೆಲ ಮಂದಿ ನಡೆಸಿರುವ ಕುತಂತ್ರ. ಈ ಕುರಿತು ನನಗೆ ಬೇಸರವಾಗಿದೆ. ಹಾಗಾಗಿ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಮಲ್ನಾಥ್ ಹೇಳಿದ್ದಾರೆ.
ಪಂಜಾಬ್ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ಸಂದರ್ಭ ಸಿಖ್ ವಿರೋಧಿ ದಂಗೆ ವಿಷಯವನ್ನು ವಿರೋಧ ಪಕ್ಷಗಳು ಬಳಸಿಕೊಳ್ಳಬಹುದು. ಇದರಿಂದ ಪಕ್ಷಕ್ಕೆ ಹಾನಿಯಾಗುವ ಸಂಭವವೂ ಇರಬಹುದು ಎಂಬ ಹಿನ್ನೆಲೆಯಲ್ಲಿ ಕಮಲ್ನಾಥ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದರು. ರಾಜೀನಾಮೆಯನ್ನು ಸೋನಿಯಾ ಗಾಂಧಿ ಸ್ವೀಕರಿಸಿ, ಅವರನ್ನು ಪಂಜಾಬ್ ಉಸ್ತುವಾರಿ ಹುದ್ದೆಯಿಂದ ವಿಮುಕ್ತರನ್ನಾಗಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಉಸ್ತುವಾರಿ ಹುದ್ದೆಯನ್ನು ಕಮಲ್ನಾಥ್ ಅವರಿಗೆ ನೀಡಲಾಗಿತ್ತು. ಪಂಜಾಬ್ ನಲ್ಲಿ ಅಕಾಲಿದಳ, ಬಿಜೆಪಿ ಮತ್ತು ಆಪ್ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಇದಲ್ಲದೆ ಕಾಂಗ್ರೆಸ್ನಲ್ಲೇ ಇವರ ನೇಮಕದ ಕುರಿತು ವಿರೋಧವೂ ವ್ಯಕ್ತವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.