ನವದೆಹಲಿ: ಕೇರಳ ಸ್ಪೋರ್ಟ್ಸ್ ಕೌನ್ಸಿಲ್ನ ಅಧ್ಯಕ್ಷ ಹುದ್ದೆಗೆ ಖ್ಯಾತ ಅಥ್ಲೇಟ್ ಅಂಜು ಬಿ ಜಾರ್ಜ್ ಅವರು ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತನ್ನ ಹಾಗೂ ಕೌನ್ಸಿಲ್ನ ಇತರ ಸದಸ್ಯರ ಮೇಲೆ ಕ್ರೀಡಾ ಸಚಿವ ಇಪಿ ಜಯರಾಜನ್ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಅಂಜು ಮಾತ್ರವಲ್ಲದೇ ಕೌನ್ಸಿಲ್ನ ಇತರ ಸದಸ್ಯರಾದ ವಾಲಿಬಾಲ್ ಆಟಗಾರ್ತಿ ಟೋಮ್ ಜೋಸೆಫ್ ಸೇರಿದಂತೆ ಹಲವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಜಯರಾಜನ್ ಅವರಿಗೆ ಬಹಿರಂಗ ಪತ್ರ ಬರೆದಿದ್ದ ಅಂಜು, ಕಳೆದ ದಶಕಗಳಿಂದ ಕೌನ್ಸಿಲ್ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ನಿಖರ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದರು.
ಉಮ್ಮನ್ ಚಾಂಡಿ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಆಯ್ಕೆಯಾಗಿದ್ದ ಅಂಜು, ಎಡಪಂಥಿಯ ಸರ್ಕಾರ ಬಂದ ಮೇಲೆ ಸಚಿವ ಜಯರಾಜನ್ ಅವರ ಭೇಟಿಗೆ ತೆರಳಿದ್ದರು, ಈ ವೇಳೆ ಅಂಜುವಿಗೆ ಅವರು ಸಾಕಷ್ಟು ಅವಮಾನ ಮಾಡಿದ್ದು ಅಲ್ಲದೇ ನಿಮ್ಮ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು ಎನ್ನಲಾಗಿದೆ.
ಬಳಿಕ ಸಿಎಂ ಪಿನರಾಯಿ ವಿಜಯನ್ ಅವರನ್ನು ಭೇಟಿಯಾಗಿ ಅಂಜು ಅವಲತ್ತು ತೋಡಿಕೊಂಡಿದ್ದರು, ಇದು ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.