ನವದೆಹಲಿ: ದೆಹಲಿಯ ಎಎಪಿ ಸರ್ಕಾರದಲ್ಲಿ ನೀರಾವರಿ ಸಚಿವರಾಗಿರುವ ಕಪಿಲ್ ಮಿಶ್ರಾ ಅವರಿಗೆ 400 ಕೋಟಿ ವಾಟರ್ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ ನೋಟಿಸ್ ಜಾರಿಗೊಳಿಸಿದೆ.
ಹಗರಣದ ಸಂಬಂಧದ ತನಿಖೆಯಲ್ಲಿ ಪಾಲ್ಗೊಳ್ಳಬೇಕು ಮತ್ತು ಈ ನಿಟ್ಟಿನಲ್ಲಿ ಕ್ರಮ ಜರುಗಿಸಲು ವಿಳಂಬ ಧೋರಣೆ ಅನುಸರಿಸಿದ್ದು ಯಾಕೆ ಎಂಬುದನ್ನು ವಿವರಿಸಬೇಕು ಎಂದು ನೋಟಿಸ್ನಲ್ಲಿ ಹೇಳಲಾಗಿದೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಹೆಸರು ಈ ಬಹುಕೋಟಿ ಹಗರಣದಲ್ಲಿ ಕೇಳಿ ಬಂದಿದ್ದು, ಕಳೆದ ವಾರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.