News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಲ್ತಾಡು ವಿಷ್ಣುಮೂರ್ತಿ ದೈವದ ಒತ್ತೆಕೋಲ

ಪಾಲ್ತಾಡಿ: ಪಾಲ್ತಾಡು ವಿಷ್ಣುನಗರದಲ್ಲಿ ವರ್ಷಂಪ್ರತಿ ನಡೆಯುವ ವಿಷೂಮೂರ್ತಿ ದೈವದ ಒತ್ತೆಕೋಲ ಮಾ.24 ಹಾಗೂ 25ರಂದು ನಡೆಯಿತು.

DSCKola-1

ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸುಮಾರು 5000 ಕ್ಕೂ ಮಿಕ್ಕಿ ಜನರು ಅನ್ನಪ್ರಸಾದ ಸ್ವೀಕರಿಸಿದರು.

DSCKola-2

ಅನ್ನಸಂತರ್ಪಣೆಯ ಬಳಿಕ ಕುಳಿಚಟ್ಟು ನಡೆಯಿತು. ನಂತರ ಯಕ್ಷರಂಗ ಬೆಳ್ಳಾರೆ ಇದರ ಕಲಾವಿದರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಕೋಟಿ-ಚೆನ್ನಯ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

DSCKola-3
ಮಾ.25ರಂದು ಬೆಳಿಗ್ಗೆ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಹರಕೆ, ಪ್ರಸಾದ ವಿತರಣೆ ನಡೆಯಿತು. ಬಳಿಕ ಗುಳಿಗನ ಕಟ್ಟೆಯಲ್ಲಿ ಮುಳ್ಳುಗುಳಿಗನ ಕೋಲ ನಡೆಯಿತು.

Kola4

ಈ ಸಂಧರ್ಭದಲ್ಲಿ ಸಮಿತಿ ಗೌರವಾರ್ಧಯಕ್ಷರಾದ ಪಟೇಲ್ ನಾರಾಯಣ ರೈ ಪಾಲ್ತಾಡು, ಶೀಲಾವತಿ ಎಸ್ ರೈ, ಅಧ್ಯಕ್ಷ ಎನ್.ವಿಶ್ವನಾಥ ರೈ, ಉಪಾರ್ಧಯಕ್ಷ ನವೀನ್ ರೈ ನಡುಮನೆ, ಕಾರ್ಯದರ್ಶಿ ಪದ್ಮನಾಭ ರೈ, ಕೋಶಾಧಿಕಾರಿ ಬಿ.ವಸಂತ ಶೆಟ್ಟಿ ಹಾಗೂ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top