ನವದೆಹಲಿ: ಶೀಲಾ ದೀಕ್ಷಿತ್ ಅವರನ್ನು ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ಚುನಾವಣೆಯ ಸಾರಥ್ಯವನ್ನು ನೀಡಿ ಸಿಎಂ ಅಭ್ಯರ್ಥಿಯನ್ನಾಗಿಸಲು ಹೊರಟಿದ್ದ ಕಾಂಗ್ರೆಸ್ಸಿಗೆ ನಿರಾಶೆಯಾಗಿದೆ ಎನ್ನಲಾಗಿದೆ. ಇದಕ್ಕೆ ಕಾರಣ ಶೀಲಾ ದೀಕ್ಷಿತ್ ಅವರು ಚುನಾವಣೆಯ ಸಾರಥ್ಯವನ್ನು ವಹಿಸಲು ನಿರಾಕರಿಸಿರುವುದು.
ಮೂಲಗಳ ಪ್ರಕಾರ ಉತ್ತರ ಪ್ರದೇಶದ ಚುನಾವಣೆಯ ಸಾರಥ್ಯ ವಹಿಸಲು ಇಷ್ಟವಿಲ್ಲದ ಕಾರಣ ಶೀಲಾ ದೀಕ್ಷಿತ್ ಅವರು ಒಪ್ಪಲಿಲ್ಲವಂತೆ. ಹಾಗಾಗಿ ಕಾಂಗ್ರೆಸ್ಸಿಗೆ ಇದೀಗ ಸಿಎಂ ಅಭ್ಯರ್ಥಿಯ ಆಯ್ಕೆ ಇನ್ನೂ ಪೂರ್ಣವಾಗದೆ ಹೋಗಿದೆ.
ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರದ ನೇತೃತ್ವವನ್ನು ವಹಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಪ್ರಕಾರ ಬ್ರಾಹ್ಮಣ ಸಮುದಾಯದ ನಾಯಕರೇ ಆಗಬೇಕೆಂದಿದ್ದರು. ದೆಹಲಿಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ಅವರೇ ಸಿಎಂ ಅಭ್ಯರ್ಥಿಗೆ ಅರ್ಹರು ಎಂದು ಅವರೆದುರು ಪ್ರಸ್ತಾಪವಿಟ್ಟಾಗ ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ. ನಿರಾಕರಿಸಲು ನಿಖರವಾದ ಕಾರಣವೇನೆಂದು ತಿಳಿದಿಲ್ಲ.
ಇನ್ನೊಂದೆಡೆ ಉತ್ತರ ಪ್ರದೇಶದ ಬ್ಲಾಕ್ ಕಾಂಗ್ರೆಸ್ ಸದಸ್ಯರು ಪ್ರಿಯಾಂಕ ಗಾಂಧಿಯವರನ್ನೇ ಕರೆತರಬೇಕು ಎಂಬ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.