ನವದೆಹಲಿ: ಇದುವರೆಗೆ ವಿರೋಧ ಪಕ್ಷ, ಹಣಕಾಸು ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಇದೀಗ ಪ್ರಧಾನಿಯನ್ನೇ ಪ್ರಶ್ನಿಸಲು ಆರಂಭಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ’ಅಚ್ಛೇ ದಿನ್’ನ್ನು ಪ್ರಶ್ನೆ ಮಾಡಿರುವ ಅವರು, ಜಿಡಿಪಿ ಪ್ರಗತಿಯ ದರವನ್ನು ಬಹಿರಂಗಪಡಿಸಿದರೆ ದೊಡ್ಡ ವಿವಾದವೇ ಸೃಷ್ಟಿಯಾಗಲಿದೆ ಎಂದಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ನಿಜವಾದ ಜಿಡಿಪಿಯ ಬಗ್ಗೆ ಮಾಹಿತಿ ಬಹಿರಂಗಪಡಿಸಿದರೆ ನನ್ನ ಪಕ್ಷಕ್ಕೆಯೇ ತೊಂದರೆಯಾಗಲಿದೆ, ನನ್ನ ಮೇಲೆ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಬರಬಹುದು ಎಂದಿದ್ದಾರೆ.
ರಾಜ್ಯಸಭಾ ಸದಸ್ಯರಾದ ಬಳಿಕ ಒಂದೇ ಒಂದೇ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ಸ್ವಾಮಿ ಸುದ್ದಿಯ ಕೇಂದ್ರ ಬಿಂದುವಾಗುತ್ತಿದ್ದಾರೆ. ಇತ್ತೀಚಿಗೆ ನರೇಂದ್ರ ಮೋದಿ ನೀಡಿದ ಕಿವಿಮಾತನ್ನೂ ಅವರು ಗಣನೆಗೆ ತೆಗೆದುಕೊಳ್ಳದೆ, ನಾನು ಯಾರಿಗೂ ಕೇರ್ ಮಾಡಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.