ನವದೆಹಲಿ: ಕೇಂದ್ರ ಮತ್ತು ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ದೆಹಲಿ ಸರ್ಕಾರದ ಅರ್ಜಿ ಜುಲೈ 4ರಂದು ವಿಚಾರಣೆಗೆ ಬರಲಿದೆ.
ದೆಹಲಿಗೆ ವಿಶೇಷ ಪ್ರಾತಿನಿಧ್ಯ ನೀಡುವ ಕಲಂ 239ಎ ಬಗ್ಗೆ ವಿವರಣೆ ನೀಡುವಂತೆ ಕೋರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿಯ ಎಎಪಿ ಸರ್ಕಾರ ಸುಪ್ರೀಂಗೆ ಅರ್ಜಿ ಹಾಕಿತ್ತು. ಈ ಅರ್ಜಿಯನ್ನು ಸೋಮವಾರ ಮುಖ್ಯ ನ್ಯಾಮೂರ್ತಿ ಟಿಎಸ್ ಠಾಕೂರ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ.
ಕಲಂ 131ರ ಅನ್ವಯ ಕೇಂದ್ರ ಮತ್ತು ರಾಜ್ಯಗಳ ನಡುವಿನ ಯಾವುದೇ ವಿವಾದಗಳನ್ನು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಸಬೇಕು ಎಂದು ಹಿರಿಯ ವಕೀಲರಾದ ಕೆಕೆ ವೇಣುಗೋಪಾಲ್ ಮತ್ತು ಇಂದಿರಾ ಜೈಸಿನ್ಹಾ ಕೋರ್ಟ್ಗೆ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಮತ್ತು ರಾಜ್ಯದ ನಡುವಣ ಹಲವಾರು ವಿವಾದಗಳ ತೀರ್ಪನ್ನು ದೆಹಲಿ ಹೈಕೋರ್ಟ್ ಪೆಂಡಿಂಗ್ ಇಟ್ಟಿದೆ. ಇದರಲ್ಲಿ ಭ್ರಷ್ಟಾಚಾರ ನಿಗ್ರಹದಳದ ನಿಯಂತ್ರಣವೂ ಒಂದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.