ವಾಷಿಂಗ್ಟನ್: ಬಾಂಗ್ಲಾದೇಶದ ಢಾಕಾದಲ್ಲಿ ಶುಕ್ರವಾರ ರಾತ್ರಿ ಉಗ್ರರು ದಾಳಿ ನಡೆಸಿದ್ದು, ಜಾಗತಿಕ ಭಯೋತ್ಪಾದಕ ವಿರೋಧಿ ನೀತಿ ಒಪ್ಪಂದಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಭಾರತ ಕರೆ ನೀಡಿದೆ.
ವಿಶ್ವ ಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯ್ಯದ್ ಅಕ್ಬರುದ್ದೀನ್, ಭಯೋತ್ಪಕರು ಅಥವಾ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ಮತ್ತು ರಕ್ಷಣೆ ನೀಡುತ್ತಿರುವ ರಾಷ್ಟ್ರಗಳನ್ನು ಭಯೋತ್ಪಾದನೆಯ ಹೊಣೆ ಹೊರಿಸಬೇಕು. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಭಯೋತ್ಪಾದಕ ವಿರೋಧಿ ನೀತಿ ಜಾರಿಗೆ ತರಲು ವಿಫಲಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂದಿನ ಅಧಿವೇಶನದಲ್ಲಿ ಜಾಗತಿಕ ಭಯೋತ್ಪಾದನೆ ವಿರುದ್ಧ ಸಮಗ್ರ ನೀತಿಯನ್ನು ಎಲ್ಲಾ ರಾಷ್ಟ್ರಗಳು ಅಳವಡಿಸಬೇಕು. ಎಲ್ಲಾ ರಾಷ್ಟ್ರಗಳು ಈ ನೀತಿಯನ್ನು ಅಳವಡಿಸಿಕೊಂಡಲ್ಲಿ ಅಂತಾರಾಷ್ಟ್ರೀಯ ಸಮುದಾಯ ಭಯೋತ್ಪಾನೆ ವಿರುದ್ಧ ಕ್ರಮ ಕೈಗೊಳ್ಳುವಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ಭಯೋತ್ಪಾದಕ ವಿರೋಧಿ ನೀತಿಯನ್ನು ಭಾರತ 20 ವರ್ಷಗಳ ಹಿಂದೆಯೇ ಪ್ರಸ್ತಾಪಿಸಿತ್ತು. ಆದರೆ ಇದರ ಕೆಲವು ರಾಷ್ಟ್ರಗಳ ಬಿಕ್ಕಟ್ಟಿನಿಂದ ಜಾರಿಗೆ ತರಲು ವಿಫಲಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.