ಮುಂಬಯಿ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಜೊತೆಗೆ ಸಮಾಧಾನ ಸೂಚಕವನ್ನು ಸ್ಪಷ್ಟಪಡಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ‘ಇಂದು ನೆಟ್ಟ ಸಸಿ ಸ್ನೇಹದ ಸಂಕೇತವಾಗಿದ್ದು, ಭವಿಷ್ಯದಲ್ಲಿ ಅದು ದೊಡ್ಡ ಮರವಾಗಿ ಬೆಳೆಯಲಿದೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಯಾವುದೇ ಸಂದರ್ಭದಲ್ಲಿ ಬೆಂಬಲದ ಅಗತ್ಯವಿದ್ದಲ್ಲಿ ಭುಜಕ್ಕೆ ಭುಜ ಕೊಟ್ಟು ನಿಲ್ಲುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಅರಣ್ಯಗಳನ್ನು ಹೆಚ್ಚಿಸಲು ರಾಜ್ಯಾದ್ಯಂತ 2 ಕೋಟಿ ಸಸಿಗಳನ್ನು ನೆಡುವ ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಫಡ್ನವಿಸ್ ಹಾಗೂ ಠಾಕ್ರೆ ಮುಂಬಯಿಯ ಮಹಿಮ್ ನೇಚರ್ ಪಾರ್ಕ್ನಲ್ಲಿ ನಡೆದ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಾನು ಪ್ರಕೃತಿಯಿಂದ ಬೇಕಾದುದೆಲ್ಲವನ್ನೂ ಪಡೆದುಕೊಳ್ಳುತ್ತೇವೆ. ಆದರೆ ಮರಳಿ ಏನನ್ನೂ ನೀಡುವುದಿಲ್ಲ. ಇದು ಸರಿಯಲ್ಲ. ನಾವು ಮುಂದಿನ ಪೀಳಿಗೆಗೆ ಏನನ್ನೂ ಸಂರಕ್ಷಿಸದಿದ್ದಲ್ಲಿ ಅದರ ಪ್ರತಿಯಾಗಿ ಭವಿಷ್ಯದಲ್ಲಿ ಪ್ರಕೃತಿ ಕೂಡ ನಮಗೆ ಏನನ್ನು ನೀಡುವುದಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.