ನವದೆಹಲಿ: ಮೇನಕಾ ಗಾಂಧಿ ಮತ್ತು ಸೋನಿಯಾ ಗಾಂಧಿ ಕುಟುಂಬದ ನಡುವೆ ಭಿನ್ನಾಭಿಪ್ರಾಯವಿದೆ. ಒಬ್ಬರನ್ನು ಕಂಡರೆ ಒಬ್ಬರಿಗಾಗಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಆದರೀಗ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಏರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಬಿಜೆಪಿಯ ಫೈಯರ್ ಬ್ರಾಂಡ್ ಎಂದೇ ಕರೆಯಿಸಿಕೊಳ್ಳುವ ವರುಣ್ ಗಾಂಧಿಯವರನ್ನು ತಲುಪುವ ಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ.
ಆಶ್ಚರ್ಯಕರ ಸಂಗತಿಯೆಂದರೆ ಜೂನ್ 23ರಂದು ಸಂಜಯ್ ಗಾಂಧಿ ಜನ್ಮದಿನದಂದು ಕಾಂಗ್ರೆಸ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಅವರಿಗೆ ಶ್ರದ್ಧಾಂಜಲಿಯನ್ನು ಸಮರ್ಪಣೆ ಮಾಡಿದ್ದು ಮತ್ತು ಸೋನಿಯಾ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದು.
ಅಷ್ಟೇ ಅಲ್ಲದೇ ಹಲವಾರು ಕಾಂಗ್ರೆಸ್ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸಂಜಯ್ ಗಾಂಧಿಯನ್ನು ಸ್ಮರಿಸಿದ್ದು ಕೂಡ ಅಚ್ಚರಿ ಮೂಡಿಸಿತ್ತು.
ಮೂಲಗಳ ಪ್ರಕಾರ ರಾಹುಲ್, ಪ್ರಿಯಾಂಕ ಮತ್ತು ವರುಣ್ ಈ ಸಂದರ್ಭದಲ್ಲಿ ಪರಸ್ಪರ ಎಸ್ಎಂಎಸ್ಗಳನ್ನು ಹಂಚಿಕೊಂಡಿದ್ದಾರೆ. ಗುಪ್ತವಾಗಿ ಈ ಮೂವರು ಪರಸ್ಪರ ಸಂಪರ್ಕದಲ್ಲಿದ್ದಾರೆ. ಇಲ್ಲಿ ರಾಜಕೀಯಕ್ಕೆ ಇದುವರೆಗೆ ಆಸ್ಪದವಿಲ್ಲ. ಆದರೆ ಸೋನಿಯಾ ಮತ್ತು ಮೇನಕಾ ಭಿನ್ನಾಭಿಪ್ರಾಯಗಳಿಂದಾಗಿ ಈ ಸಂಬಂಧಗಳನ್ನು ಗುಟ್ಟಾಗಿಯೇ ಇರಿಸಲಾಗಿದೆ ಎನ್ನಲಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕ ವರುಣ್ ವಿರುದ್ಧ ಬಹಿರಂಗ ವಾಗ್ ಪ್ರಹಾರ ನಡೆಸಿದ ಬಳಿಕ ಸಂಬಂಧ ಬಿರುಕು ಬಿಟ್ಟಿತ್ತು. ಆದರೆ ಇತ್ತೀಚಿಗೆ ವರುಣ್ ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ. ಬಹಿರಂಗ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ ಸೃಷ್ಟಿಸಿಕೊಂಡಿದ್ದಾರೆ. ಇದನ್ನೇ ಬಳಸಿಕೊಂಡು ಕಾಂಗ್ರೆಸ್ ವರುಣ್ ಅವರನ್ನು ತಲುಪುವ ಪ್ರಯತ್ನ ಮಾಡುತ್ತಿದೆ ಎನ್ನಲಾಗಿದೆ.
ಉತ್ತರಪ್ರದೇಶದ ಚುನಾವಣೆ ವೇಳೆ ವರುಣ್ ಅವರನ್ನು ತಣ್ಣಗಾಗಿಸಿ ಅವರಿಂದ ಬಿಜೆಪಿಗೆ ಯಾವುದೇ ಲಾಭವಾಗದಂತೆ ಮಾಡುವ ಹುನ್ನಾರವೂ ಕಾಂಗ್ರೆಸ್ಗಿದೆ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.