ಚೆನ್ನೈ: ಕೇವಲ ಮೋಜಿಗಾಗಿ ನಾಯಿಯೊಂದನ್ನು ನಾಲ್ಕು ಅಂತಸ್ತಿನ ಕಟ್ಟಡದಿಂದ ಕೆಳಕ್ಕೆ ಎಸೆದ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಇದೀಗ ಅವರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.
ಗೌತಮ್ ಸುದರ್ಶನ್ ಎಂಬಾತ ನಾಯಿಯನ್ನು ಕಟ್ಟಡದಿಂದ ಕೆಳಕ್ಕೆ ದೂಡಿದ್ದಾನೆ. ಈ ದೃಶ್ಯವನ್ನು ಆಶಿಶ್ ಪಾಲ್ ಎಂಬಾತ ಚಿತ್ರೀಕರಣ ಮಾಡಿದ್ದಾನೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ, ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಬಳಿಕ ಪ್ರಕರಣವೂ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಇವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡಲಾಗಿದೆ.
ಇವರ ಕುಕೃತ್ಯದಿಂದ ಕೈಕಾಲು ಮುರಿದುಕೊಂಡಿರುವ ನಾಯಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದೆ. ಈ ನಾಯಿ ಬದುಕಿದ್ದೇ ಹೆಚ್ಚು ಎನ್ನುವ ಪ್ರಾಣಿಪ್ರಿಯರು ಇದಕ್ಕೆ ಭದ್ರಕಾಳಿ ದೇವಿಯ ಪ್ರತೀಕವಾಗಿ ಭದ್ರ ಎಂಬ ಹೆಸರಿಟ್ಟಿದ್ದಾರೆ.
ಇಬ್ಬರು ದುರುಳ ವಿದ್ಯಾರ್ಥಿಗಳನ್ನು ಇದೀಗ ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.