ನವದೆಹಲಿ: ಜುಲೈ 18 ರಂದು ಸಂಸತ್ ಅಧಿವೇಶನ ಆರಂಭಗೊಳ್ಳಲಿದ್ದು, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಸೂದೆ ಜಾರಿಗೆ ತರಲು ಕೇಂದ್ರ ಸರ್ಕಾರ ಕಾಂಗ್ರೆಸ್ ಬೆಂಬಲ ಕೋರಿದೆ.
ಮುಂಗಾರು ಅಧಿವೇಶನ ಆ.12 ರಂದು ಕೊನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರ್ಯಸೂಚಿಯಲ್ಲಿ ಜಿಎಸ್ಟಿ ಮಸೂದೆಗೆ ಮೊದಲ ಆದ್ಯತೆ ನೀಡಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಕಾಂಗ್ರೆಸ್ನ ಗುಲಾಂ ನಬಿ ಆಜಾದ್ ಹಾಗೂ ಆನಂದ್ ಶರ್ಮಾ ಅವರನ್ನು ಭೇಟಿ ಮಾಡಲಿದ್ದಾರೆ.
ಬಿಜೆಪಿ ಕೆಲವು ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಜಯ ಸಾಧಿಸಿದ ಹೊರತಾಗಿಯೂ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಹೊಂದಿದ್ದು, ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಈಗಾಗಲೇ ಆಜಾದ್ ಮತ್ತು ಆನಂದ್ ಶರ್ಮಾ ಅವರನ್ನು ಭೇಟಿ ಮಾಡಿದ್ದಾರೆ.
ಜಿಎಸ್ಟಿ ರಾಜ್ಯ ಮತ್ತು ಕೇಂದ್ರದ ಮಾರುಕಟ್ಟೆಯಲ್ಲಿ ಏಕೀಕೃತ ತೆರಿಗೆ ನಿಯಮವನ್ನು ಹೊಂದಲಿದೆ.
ಲೊಕಸಭೆಯಲ್ಲಿ ಹೆಚ್ಚಿನ ಬೆಂಬಲದೊಂದಿಗೆ ಕೇಂದ್ರ ಸರ್ಕಾರ ಜಿಎಸ್ಟಿ ಮಸೂದೆಯ ಸಾಂವಿಧಾನಿಕ ತಿದ್ದುಪಡಿಗೆ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷಗಳು ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಒತ್ತಾಯಿಸಿವೆ.
ಜಿಎಸ್ಟಿ ದರವನ್ನು ಶೇ.20 ಕ್ಕಿಂತ ಕಡಿಮೆ ಮಾಡಲು ಕಾಂಗ್ರೆಸ್ ಒತ್ತಾಯಿಸಿದೆ. ಆದರೆ ಜಿಎಸ್ಟಿ ದರ ಕಡಿಮೆ ಮಾಡಿದಲ್ಲಿ ಪ್ರತಿ ಬಾರಿ ದರ ಬದಲಾವಣೆ ಮಾಡುವ ಪರಿಸ್ಥಿತಿ ಎದುರಾಗಲಿದ್ದು, ಮತ್ತೆ ಸಂವಿಧಾನ ತಿದ್ದುಪಡಿ ಅನಿವಾರ್ಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಸರಕುಗಳ ರಫ್ತಿಗೆ ಸಾರಿಗೆ ತೆರಿಗೆ ಮೇಲೆ ಹೇರಲಾದ ರೂ.1 ಹೆಚ್ಚುವರಿ ತೆರಿಗೆಯನ್ನು ಕೈಬಿಡಲು ಹಾಗೂ ರಾಜ್ಯಗಳ ನಡುವೆ ಆದಾಯ ತೆರಿಗೆ ವಿವಾದಗಳನ್ನು ಪರಿಗಣಿಸಲು ವಿಧಾನಪರಿಷತ್ಗಳಲ್ಲಿ ಹೆಚ್ಚಿನ ಅಧಿಕಾರ ನೀಡುವಂತೆ ಕಾಂಗ್ರೆಸ್ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.